ಕೂಲಿ ಕಾರ್ಮಿಕರಿದ್ದ ವಾಹನ ಪಲ್ಟಿ - ಬೈಕ್ ಡಿಕ್ಕಿ: ಓರ್ವ ಸಾವು, 15ಕ್ಕೂ ಅಧಿಕ ಮಂದಿಗೆ ಗಾಯ | Janata news
ರಾಯಚೂರು: : ಟಾಟಾ ಏಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಹತ್ತಿರದ ರೋಡಲಬಂಡಾ ಕ್ರಾಸ್ ಬಳಿ ನಡೆದಿದೆ.
ಲಿಂಗಸಗೂರು ಗ್ರಾಮದಿಂದ ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವಾಹನಕ್ಕೆ ಎದುರಾಗಿ ಬಂದ ಬೈಕ್ ತಪ್ಪಿಸಲು ಹೋಗಿ ಕಾರ್ಮಿಕರಿದ್ದ ವಾಹನ ರಸ್ತೆಯ ಕಂದಕಕ್ಕೆ ಉರುಳಿದೆ. ಇದರಿಂದಾಗಿ ಬೈಕ್ನಲ್ಲಿದ್ದವರಿಗೂ ಸೇರಿದಂತೆ 15 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
RELATED TOPICS:
English summary :Rayachuru