ಸಿಎಂ ಬಿಎಸ್ವೈ, ಹೆಚ್ಡಿಕೆ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸಭಾಪತಿ ಬಸವರಾಜ ಹೊರಟ್ಟಿ | Janata news
ಬೆಂಗಳೂರು : ವಿಧಾನ ಪರಿಷತ್ತಿನ ನೂತನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇಂದು ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಹೊರಟ್ಟಿ ಅವರು ಸಭಾಪತಿಯಾಗಲು ಬೆಂಬಲಿಸಿದ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಜೆಪಿ ನಗರದಲ್ಲಿರುವ ಹೆಚ್.ಡಿ. ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ ಬಸವರಾಜ ಹೊರಟ್ಟಿ ಅವರು, ಹೂಗುಚ್ಛ ನೀಡಿ ಸಭಾಪತಿಯಾಗಲು ಬೆಂಬಲಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
ಬಸವರಾಜ ಹೊರಟ್ಟಿ ಅವರನ್ನು ರಾತ್ರಿ ಊಟಕ್ಕೆ ಆಹ್ವಾನಿಸಿದ ಸಿಎಂ ಯಡಿಯೂರಪ್ಪನವರು, ತಮ್ಮ ನಿವಾಸದಲ್ಲಿ ಶುಭಾಶಯ ತಿಳಿಸಿದರು.
RELATED TOPICS:
English summary :Bangalore