22 ಪ್ರಕರಣಗಳ ರೌಡಿ ಕಾಲಿಗೆ ಗುಂಡೇಟು, ಬಂಧನ | Janata news
ಬೆಂಗಳೂರು : ರೌಡಿ ಶಬರೀಷ್ ಅಲಿಯಾಸ್ ಪಪ್ಪಿ (27) ಎಂಬಾತನನ್ನು ಕಾಲಿಗೆ ಗುಂಡು ಹೊಡೆದು ಯಲಹಂಕ ಪೊಲೀಸರು ಸೆರೆಹಿಡಿದಿದ್ದಾರೆ.
ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಆತ ಮಚ್ಚಿನಿಂದ ಹಲ್ಲೆ ಮಾಡಿದ್ದ. ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ರಾಮಕೃಷ್ಣ ರೆಡ್ಡಿ, ಶಬರೀಷ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡಿರುವ ರೌಡಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಸಿಬ್ಬಂದಿಯೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಗಳು ಯಲಹಂಕ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳ್ಳತನ, ಸುಲಿಗೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಿನ್ನೆಯಷ್ಟೇ ಗ್ಯಾಂಗ್ನ ಪ್ರಮುಖ ಆರೋಪಿ ಶಬರೀಷ್ ಎಡಗಾಲಿಗೆ ಗುಂಡು ಹೊಡೆದು ಬಂಧಿಸಲಾಗಿತ್ತು. ಈತನ ಜೊತೆಯಲ್ಲಿದ್ದ ಮತ್ತಿಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದರು.
ಇಂದು ವಿದ್ಯಾರಣ್ಯಪುರ ಠಾಣೆಯ ಕಳತೂರು ಫಾರ್ಮ್ ಬಳಿ ಆರೋಪಿಗಳ ಇರುವಿಕೆ ಬಗ್ಗೆ ಖಚಿತಿ ಮಾಹಿತಿ ಮೇರೆಗೆ ಯಲಹಂಕ ನ್ಯೂಟೌನ್ ಠಾಣೆಯ ಇನ್ಸ್ಪೆಕ್ಟರ್ ಅರುಣ್ ಕುಮಾರ್ ನೇತೃತ್ವದ ತಂಡ ತೆರಳಿದೆ. ಸಿಬ್ಬಂದಿ ಮಧುಕುಮಾರ್ ಬಂಧಿಸಲು ಹೋಗುತ್ತಿದ್ದಂತೆ ಆರೋಪಿಗಳು ಹಲ್ಲೆ ನಡೆಸಿ ಎಸ್ಕೇಪ್ ಆಗಲು ಮುಂದಾಗಿದ್ದಾರೆ. ಶರಣಾಗುವಂತೆ ಗಾಳಿಯಲ್ಲಿ ಗುಂಡು ಹಾರಿಸಿದರೂ ಕೇಳದ ಆರೋಪಿ ಇಮ್ರಾನ್ ಪಾಷಾ ಕಾಲಿಗೆ ಗುಂಡು ಹಾರಿಸಿ ಇನ್ಸ್ ಪೆಕ್ಟರ್ ಗುಂಡೇಟು ನೀಡಿ ಬಂಧಿಸಿದ್ದಾರೆ.
ಕಳೆದ ಫೆಬ್ರುವರಿ 3 ರಂದು ಯಲಹಂಕ ಸುರಭೀ ಲೇಔಟ್ನಲ್ಲಿ ಎರಡು ಬ್ಲಾಕ್ ಪಲ್ಸರ್ ಬೈಕ್, ಹೊಂಡಾ ಡಿಯೋ ಕದ್ದಿದ್ದರು. ಯಲಹಂಕ ಏರ್ ಶೋ ವೇಳೆ ಬೈಕ್ ಕಳ್ಳತನ ಮಾಡಿದ್ದರು. ಈ ಬಗ್ಗೆ ಯಲಹಂಕ ಠಾಣೆಯಲ್ಲಿ ಮೂರು ಎಫ್ಐಆರ್ ದಾಖಲಾಗಿತ್ತು.