ಜಿಲೆಟಿನ್ ಸ್ಫೋಟ: ಸರ್ಕಾರ ಮಾಧ್ಯಮದ ಮುಂದೆ ತಾತ್ಕಾಲಿಕ ಹೇಳಿಕೆ ಕೊಡದೆ ಕಠಿಣ ಕ್ರಮಕೈಗೊಳ್ಳಲಿ :ಹೆಚ್ಡಿಕೆ | Janata news
ರಾಮನಗರ : ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿವೆ. ಸರ್ಕಾರದ ಬೇಜಾವಾಬ್ದಾರಿ ಎದ್ದು ಕಾಣ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೆನಾಗೇವಲ್ಲಿ ಸಮೀಪದ ಕ್ವಾರೆಯಲ್ಲಿ ಜಿಲೆಟಿನ್ ಸ್ಫೋಟಗೊಂಡು ದುರಂತದ ಬಗ್ಗೆ ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಇದು ಸರ್ಕಾರದ ಶಾಮೀಲು ಮತ್ತು ಬೇಜವಬ್ದಾರಿತನ, ಅಧಿಕಾರಿಗಳ ಪ್ರೋತ್ಸಾಹದಿಂದ ಇಂತಹ ಪ್ರಕರಣಗಳು ಮರುಕಳಿಸುತ್ತಿವೆ.
ಸರ್ಕಾರಕ್ಕೆ ಜನರ ಜೀವ ರಕ್ಷಣೆ ಮಾಡುವ ಜವಬ್ದಾರಿಯಿದ್ದರೆ ತನಿಖೆ ನಡೆಸಿ ಕ್ರಮಕೈಗೊಳ್ಳಲಿ, ಅದು ಬಿಟ್ಟು ಘಟನೆ ಸಂಭವಿಸಿದ ವೇಳೆ ಮಾಧ್ಯಮಗಳ ಮುಂದೆ ತಾತ್ಕಾಲಿಕ ಹೇಳಿಕೆಗಳನ್ನು ನೀಡಬೇಡಿ ಎಂದು ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಕರಣ ನಡೆದಾಗ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ಕೊಡ್ತಾರೆ ಅಷ್ಟೇ. ಅಲ್ಲದೇ ಒಂದು ವಾರದ ಮುಂಚೆಯೇ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಆದರೂ ಈ ಘಟನೆ ನಡೆದಿದೆ ಅಂದರೆ ಇವರಿಗೆ ಮೊದಲೇ ಗೊತ್ತಿತ್ತು ಅನಿಸುತ್ತದೆ ಎಂದು ಘಟನೆಯ ಬಗ್ಗೆ ಮಾಜಿ ಸಿಎಂ ಎಚ್ಡಿಕೆ ಸಂಶಯ ವ್ಯಕ್ತಪಡಿಸಿದರು.
ಕಲ್ಲುಗಣಿಗಾರಿಕೆ ಹೆಚ್ಚಿನ ಹಣವಿದೆ. ಮರಳಿನ ಕೊರತೆಯಿಂದಾಗಿ ಉಲ್ಭಣಗೊಂಡಿದೆ. ಹೀಗಾಗಿ ಅಕ್ರಮ ಗಣಿಗಾರಿಕೆ ಹೆಚ್ಚು ನಡೆಯುತ್ತಿವೆ. ಸರ್ಕಾರ ಬರಿ ಹೇಳಿಕೆ ಕೊಡುವುದಲ್ಲ, ಅನುಭವವಿಲ್ಲದವರು ಸ್ಫೋಟ ವಸ್ತು ಸಾಗಿಸುತ್ತಿದ್ದಾರೆ. ಇದರಿಂದ ಇಂತಹ ಅವಘಡಗಳು ನಡೆಯುತ್ತಿವೆ. ಮುಂದೆ ಈ ರೀತಿ ಆಗದಂತೆ ಕಠಿಣ ಕ್ರಮ ತೆಗೆದುಕೊಳ್ಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೆಚ್ಡಿಕೆ ಆಗ್ರಹಿಸಿದ್ದಾರೆ.
ಇತ್ತೀಚೆಗೆ ರಾಜ್ಯದೆಲ್ಲೆಡೆ ಅಕ್ರಮಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಇಲ್ಲಿ ಅಧಿಕಾರಿಗಳು ಹಣಕ್ಕೆ ಆಸೆಪಟ್ಟು ಹಾಗು ರಾಜಕಾರಣಿಗಳ ಒತ್ತಡಕ್ಕೆ ಮಣಿದು ಅಕ್ರಮಗಣಿಗಾರಿಕೆಗೆ ಅನುಮತಿ ನೀಡುತ್ತಿರುವುದು ದುರಾದೃಷ್ಟಕರ ಎಂದು ಅಧಿಕಾರಿಗಳ ಮತ್ತು ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.