ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ, ಬಿಜೆಪಿಯಿಂದ ನನ್ನನ್ನು ಏನು ಮಾಡಲು ಆಗಲ್ಲ : ಎಚ್ಡಿಕೆ | Janata news
ರಾಮನಗರ : ನಾನು ನೋಡದಿರುವ ಬಿಜೆಪಿ ಪಕ್ಷನಾ..? ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ. ಹಾಗಾಗಿ ಬಿಜೆಪಿಯಿಂದ ನನ್ನನ್ನು ಏನು ಮಾಡಲು ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, 2006ರಲ್ಲಿ ಎಲ್ಲ ಮಂಗನ ರೀತಿ ಹಾರಲು ರೆಡಿಯಾಗಿದ್ದರು. ಅವತ್ತು, ಬಿಜೆಪಿಯನ್ನು ಉಳಿಸಿದ್ದು ನಾನು. ಆಗ ಇದೇ ಯಡಿಯೂರಪ್ಪನವರು ನಮ್ಮ ಪಕ್ಷಕ್ಕೆ ಅರ್ಜಿ ಹಾಕೊಂಡು ನನ್ನತ್ತಿರ ಬಂದಿದ್ದರು. ನನಗೆ ಮಂತ್ರಿ ಮಾಡಿ ಬಿಜೆಪಿಗೆ ರಾಜೀನಾಮೆ ಕೊಡ್ತೀನಿ ಎಂದು ಬಂದಿದ್ದರು ಎಂದರು.
ರಾಮನಗರ ಜಿಲ್ಲೆಯಲ್ಲಿ ನನ್ನನ್ನು ಖಾಲಿ ಮಾಡಿಸಲು ಎಲ್ಲಾ ನಿಂತಿದ್ದಾರೆ. ಆದರೆ ದೇವೇಗೌಡರ ಕುಟುಂಬದ ಕೊಡುಗೆ ಜಿಲ್ಲೆಯ ಜನರಿಗೆ ಗೊತ್ತಿದೆ. ನಾನು ಬಂಡೆ ಹೊಡೆದಿಲ್ಲ, ಜನರ ಹಣ ಲೂಟಿ ಮಾಡಿಲ್ಲ. ನನ್ನನ್ನು ಖಾಲಿ ಮಾಡಿಸಲು ಬಂದವರು ಅವರೇ ಖಾಲಿಯಾಗಿದ್ದಾರೆ. ರಾಮನಗರ-ಚನ್ನಪಟ್ಟಣಕ್ಕೆ ಮಾಡಿರುವ ಅಭಿವೃದ್ಧಿ ಜನರಿಗೆ ಗೊತ್ತಿದೆ. ನಾನು ಸಿಎಂ ಆಗಿದ್ದಾಗ ಕೊಟ್ಟ ಕೊಡುಗೆ ಬಗ್ಗೆಯೂ ಗೊತ್ತಿದೆ ಎಂದು ಎಚ್ಡಿಕೆ ಹೇಳಿದರು.
ಜನರಿಂದ ತಲೆ ಹೊಡೆದ ಹಣದಲ್ಲಿ ಆತ ಮಂತ್ರಿಯಾಗಿದ್ದಾನೆ. ಯಡಿಯೂರಪ್ಪ ಮತ್ತು ಆರ್ಎಸ್ಎಸ್ ನಾಯಕರನ್ನು ಮೆಚ್ಚಿಸಲು ಹಾಗೆಲ್ಲ ಮಾತನಾಡ್ತಿದ್ದಾನೆ. ನನ್ನನ್ನು ಬೈಕೊಂಡು ಹೊಟ್ಟೆಪಾಡು ನೋಡಿಕೊಳ್ತಿದ್ದಾನೆ. ಚನ್ನಪಟ್ಟಣದಲ್ಲಿ ನನ್ನನ್ನು ಏನೂ ಮಾಡೋಕೆ ಆಗಲ್ಲ. ನಾನು ಈ ಮಣ್ಣಿನ ಮಗ, ನನ್ನ ಅಂತಿಮ ಕಾಲ ರಾಮನಗರದಲ್ಲಿಯೇ. ರಾಮನಗರ ಜಿಲ್ಲೆ ಯಾರ ಸ್ವತ್ತಲ್ಲ ಎಂದು ಯೋಗೇಶ್ವರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.