ಪ್ರೇಮಿಗಳು ಪ್ರೀತಿಸಿ ಊರು ಬಿಟ್ಟರು, ಧ್ವಂಸವಾಯ್ತು ಯುವಕನ ಮನೆ | Janata news
ವಿಜಯನಗರ : ಅಂತರ್ಜಾತಿ ಯುವಕ-ಯುವತಿ ಪ್ರೀತಿಸಿ ಊರು ಬಿಟ್ಟ ಹಿನ್ನೆಲೆ ಹರಪನಹಳ್ಳಿ ತಾಲೂಕಿನ ಕನ್ನನಾಯಕನಹಳ್ಳಿಯಲ್ಲಿ ಹುಡುಗನ ಸಂಬಂಧಿಕರ ಮೇಲೆ ಹಲ್ಲೆ ನಡೆಸಿ ಅವರ ಮನೆ ಧ್ವಂಸ ಮಾಡಿರುವ ಘಟನೆ ನಡೆದಿದೆ.
ಗ್ರಾಮದ ದುರಗೇಶ್, ಕವಿತಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರದ್ದು ಜಾತಿ ಬೇರೆಯಾಗಿದ್ದಂದ ಮದುವೆಗೆ ಎರಡೂ ಕುಟುಂಬಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ದುರಗೇಶ್ ಮತ್ತು ಕವಿತಾ ದೇವಸ್ಥಾನದಲ್ಲಿ ಮದುವೆಯಾಗಿ ಊರು ಬಿಟ್ಟಿದ್ದಾರೆ.
ಇದರಿಂದ ಕೋಪಗೊಂಡ ಯುವತಿ ಕಡೆಯವರು ದುರುಗೇಶ್ ಮತ್ತು ಐವರು ಸಂಬಂಧಿಕರ ಮನೆಯ ದಾಳಿ ನಡೆಸಿ ಪೀಠೋಪಕರಣ, ಟಿವಿ, ಪಾತ್ರಗಳನ್ನು ಧ್ವಂಸ ಮಾಡಿದ್ದಾರೆ. ಮನೆಯಲ್ಲಿನ ಟಿವಿ ಒಡೆದು, ಹಣ, ಚಿನ್ನ, ಅಕ್ಕಿ ಬೆಳೆ, ಬಟ್ಟೆಯನ್ನು ಕದ್ದೊಯ್ದಿದ್ದಾರೆ. ಇದರೊಂದಿಗೆ ದುರ್ಗೇಶ್ ಸಂಬಂಧಿಕರಿಗೆ ಸೇರಿದ ಎರಡು ಎಮ್ಮೆ ಮತ್ತು ಎರಡು ಟಗರುಗಳನ್ನು ಕಳ್ಳತನ ಮಾಡಿದ್ದಾರೆ. ದುರ್ಗೇಶ್ ಅಣ್ಣನ ಮನೆ ಮತ್ತು ಅಕ್ಕನ ಮನೆಯ ಎರಡು ಹೊಸ ಪಲ್ಸರ್ ಬೈಕ್ಗಳನ್ನು ಧ್ವಂಸ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹರಪನಳ್ಳಿ ಪೊಲೀಸ್ ಠಾಣೆಯಲ್ಲಿ 13 ಜನರ ಮೇಲೆ ಎಫ್ಐಆರ್ ದಾಖಲಾಗಿದೆ.