ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ: ಯುವಕ ಆತ್ಮಹತ್ಯೆಗೆ ಯತ್ನ | Janata news
ಚಿಕ್ಕಮಗಳೂರು : ತಾನು ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಮನನೊಂದ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನ ನಡೆಸಿದ ಘಟನೆ ನಡೆದಿದೆ.
ಬಣಕಲ್ ಗ್ರಾಮದ ನಿವಾಸಿ, ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಯಾಗಿದ್ದು, ಈತ ಕಳೆದ ಆರು ವರ್ಷಗಳಿಂದ ರಾಘವೇಂದ್ರ ಅದೇ ಗ್ರಾಮದ ಯುವತಿಯೋರ್ವಳನ್ನ ಪ್ರೀತಿಸುತ್ತಿದ್ದ. ಆದರೆ ಯುವತಿಯ ಪೋಷಕರು ಯುವತಿಗೆ ಬೇರೆ ಯುವಕನೊಂದಿಗೆ ಮದುವೆ ಮಾಡಲು ಸಿದ್ದತೆ ನಡೆಸಿದ್ದರು.
ಆತ್ಮಹತ್ಯೆ ಯತ್ನಕ್ಕೂ ಮುನ್ನ, ನೀನಿಲ್ಲದೆ ನಾನು ಬದುಕುವುದಿಲ್ಲ. ಬದುಕಲು ಸಾಧ್ಯವೂ ಇಲ್ಲ. ನೀನು ಸಂತೋಷವಾಗಿರು. ಆದರೆ ನಿನ್ನ ಆ ಸಂತೋಷವನ್ನ ನೋಡಲು ನಾನು ಇರುವುದಿಲ್ಲ ಎಂದು ಸುದೀರ್ಘವಾಗಿ ಡೆತ್ ನೋಟ್ ಬರೆದಿದ್ದಾನೆ.
ಯುವತಿ ಕೂಡ ಮನೆಯವರ ಒತ್ತಡಕ್ಕೆ ಮಣಿದು ಈ ನಿರ್ಧಾರಕ್ಕೆ ಬಂದಿದ್ದೇನೆ ಕ್ಷಮಿಸು ಅಂತ ಮೇಸೆಜ್ ಮಾಡಿದ್ದಾಳೆ, ಮನನೊಂದ ರಾಘವೇಂದ್ರ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ರಾಘವೇಂದ್ರನಿಗೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.