ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮೈಸೂರು ಮೂಲದ ಯೋಧ ಹುತಾತ್ಮ! | Janata news
ಮೈಸೂರು : ರಸ್ತೆ ಅಪಘಾತದಲ್ಲಿ ಮೈಸೂರು ಮೂಲದ ಬಿಎಸ್ಎಫ್ ಯೋಧ ಹುತಾತ್ಮರಾಗಿದ್ದಾರೆ.
ಬಿಎಸ್ಎಫ್ ಬೆಟಾಲಿಯನ್ನಲ್ಲಿ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತಿದ್ದ ಮೋಹನ್ (34) ಅಪಘಾತದಲ್ಲಿ ಮೃತಪಟ್ಟವರು. ತಿ.ನರಸೀಪುರ ತಾಲೂಕಿನ ಮುಡುಕುತೊರೆ ಸಮೀಪದ ಬೆಟ್ಟಹಳ್ಳಿ ಗ್ರಾಮದ ನಿವಾಸಿಯಾದ ಮೋಹನ್ 10 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಎರಡು ವರ್ಷದ ಹಿಂದೆ ಮೋಹನ್ ಮದುವೆಯಾಗಿದ್ದರು. ಹೈವೇ ಪೆಟ್ರೋಲಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದ ಮೋಹನ್, ರಸ್ತೆ ದಾಟುವಾಗ ಅತಿ ವೇಗದಿಂದ ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೋಹನ್ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
RELATED TOPICS:
English summary :Mysuru