ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ | Janata news
ಚಿಕ್ಕಮಗಳೂರು : ಯುವ ನಾಯಕ ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ಅವರು ಕಾಲಿಟ್ಟ ಕಡೆಯಲ್ಲ ಕಾಂಗ್ರೆಸ್ ನೆಲಕಚ್ಚುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ಮಾಡಿದ್ದಾರೆ.
ಬ್ರಿಟಿಷರನ್ನು ಓಡಿಸಿದವರಿಗೆ ಮೋದಿಯನ್ನು ಓಡಿಸುವುದು ಕಷ್ಟವಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಪದೇ-ಪದೇ ಸೋಲುವುದರಿಂದ ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ನನಗೆ ಅನ್ನಿಸುತ್ತದೆ.
ಕಾಂಗ್ರೆಸ್ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿಯೂ ಉಳಿದಿಲ್ಲ. 4 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಸೋಲು ಕಟ್ಟಿಟ್ಟಬುತ್ತಿ ಎಂದು ನುಡಿದರು.
ವಂಶಾಡಳಿತ, ದುರಾಡಳಿತ, ಭ್ರಷ್ಟಾಚಾರದಿಂದ ಕಾಂಗ್ರೆಸ್ ವಿನಾಶವಾಗಿದೆ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ.
ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡೊದನ್ನು ನೋಡಬಹುದಾಗಿದೆ ಎಂದು ವ್ಯಂಗ್ಯವಾಡಿದರು.