ಮನೆಯಲ್ಲೇ ಕೋವಿಡ್ ವ್ಯಾಕ್ಸಿನ್ ಪಡೆಯಲು ಅವಕಾಶವಿಲ್ಲ: ಸಚಿವ ಡಾ.ಸುಧಾಕರ್ | Janata news
ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಕೋವಿಡ್ ಮಾರ್ಗಸೂಚಿ ಪ್ರಕಾರ ಮನೆಯಲ್ಲಿ ಕೊರೊನಾ ವ್ಯಾಕ್ಸಿನ್ ಪಡೆಯಲು ಯಾರಿಗೂ ಅವಕಾಶವಿಲ್ಲ ಎಂದರು.
ಇಂದು ಬೆಳಗ್ಗೆ ಹಿರೇಕೆರೂರು ಆಸ್ಪತ್ರೆಯ ಸಿಬ್ಬಂದಿ ಕೃಷಿ ಸಚಿವ ಬಿ.ಸಿ. ಪಾಟೀಲ್ರ ಮನೆಗೆ ಬಂದು ಸಚಿವರು ಮತ್ತು ಅವರ ಪತ್ನಿ ವನಜಾ ಪಾಟೀಲ್ಗೆ ಲಸಿಕೆ ಹಾಕಿದ್ದರು. ಆಸ್ಪತ್ರೆಯಲ್ಲೇ ಪಡೆಯಬೇಕು. ಈ ಬಗ್ಗೆ ಸುತ್ತೊಲೆ ಹೊರಡಿಸುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಮನೆಯಲ್ಲಿ ಲಸಿಕೆ ಪಡೆದ್ರೆ ತಪ್ಪಿಲ್ಲ ಅನ್ನೋ ತಪ್ಪುಗ್ರಹಿಕೆಯಿಂದಾಗಿ ಈ ಘಟನೆ ನಡೆದಿದೆ. ಬಿ.ಸಿ.ಪಾಟೀಲರು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಸ್ವಲ್ಪ ತಪ್ಪಾಗಿದ್ದು, ಮತ್ತೇ ಈ ರೀತಿ ಆಗದಂತೆ ಎಚ್ಚರವಹಿಸುತ್ತೇವೆ ಎಂದರು.
ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಆಸ್ಪತ್ರೆಗೆ ಹೋಗಿ ಲಸಿಕೆ ಪಡೆದಿದ್ದಾರೆ. ಆದರೆ, ಬಿ.ಸಿ.ಪಾಟೀಲ್ ಮಾತ್ರ ಆರೋಗ್ಯ ಸಿಬ್ಬಂದಿಯನ್ನ ತನ್ನ ಮನೆ ಬಾಗಿಲಿಗೇ ಕರೆಸಿಕೊಂಡು ಲಸಿಕೆ ಪಡೆದಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.