ಕಾರಿನ ಜತೆ ಕಂದಕಕ್ಕೆ ಉರುಳಿದ ಮಹಿಳೆ- 7 ಬೈಕುಗಳು ಸಂಪೂರ್ಣ ನಜ್ಜುಗುಜ್ಜು | Janata news
ಉಡುಪಿ : ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದ ಮಹಿಳೆಯೊಬ್ಬರ ನಿಯಂತ್ರಣ ತಪ್ಪಿದ್ದರಿಂದ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.
ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ. ಕಂದಕದಲ್ಲಿದ್ದ ಮರ. ಕೆಳಭಾಗದಲ್ಲಿ ಮರವಿತ್ತು. ಈ ಹಿನ್ನೆಲೆಯಲ್ಲಿ ಅವರ ಕಾರು ಕಂದಕಕ್ಕೆ ಉರುಳಿದರೂ ಮರ ಅಡ್ಡ ಬಂದಿದ್ದರಿಂದ ಚಾಲಕಿಯ ಪ್ರಾಣಕ್ಕೆ ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
English summary :Udupi