ರಾಜ್ಯದ ಸಂದಿಗ್ಧ ಸ್ಥಿತಿಯಲ್ಲಿ, ಅಭಿವೃದ್ಧಿಗೆ ಪೂರಕ, ದೂರದೃಷ್ಟಿಯ ಬಜೆಟ್; ನಳಿನ್ಕುಮಾರ್ ಕಟೀಲ್ | Janata news
ಬೆಂಗಳೂರು : ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಎಂಟನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ಘೋಷಿಸಿದ್ದಾರೆ. ಇದು ರಾಜ್ಯದ ಅಭಿವೃದ್ದಿಗೆ ಪೂರಕವಾದ ದೂರದೃಷ್ಟಿಯನ್ನು ಹೊಂದಿದೆ ಎಂದು ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೆರೆ, ಪ್ರಾಕೃತಿಕ ವಿಕೋಪ, ಕೊವಿಡ್-19 ಸಂಕಷ್ಟದ ನಂತರ ತೆರಿಗೆ ಹೆಚ್ಚಳ ಇಲ್ಲದ ಅತ್ಯುತ್ತಮ ಬಜೆಟ್ ಅನ್ನು ಮಂಡಿಸಿದ್ದಾರೆ. ಮಹಿಳಾ ದಿನಾಚರಣೆಯಂದೇ ಈ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಮಹಿಳೆಯರಿಗಾಗಿ ವಿಶೇಷ ಅನುದಾನವನ್ನು ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
RELATED TOPICS:
English summary :Karnataka Budget 2021