ಪತ್ನಿಯನ್ನು ಕೊಂದ ಪತಿ-ಬಾವ: ದೆವ್ವ ಆಗ್ತಾಳೆಂದು ದೇಹ ತುಂಡರಿಸಿ ನಾಲೆಗೆ ಎಸೆದರು | Janata news
ಮಂಡ್ಯ : ಬಾವನ ಜೊತೆ ಸೇರಿಕೊಂಡು ಪತ್ನಿಯನ್ನು ಕೊಲೆ ಮಾಡಿದ ಪತಿ, ಸತ್ತ ಮೇಲೆ ದೆವ್ವವಾಗಿ ಕಾಡಿದರೆ ಏನು ಮಾಡೋದು ಅಂತ ಆಕೆಯ ದೇಹವನ್ನು ಕತ್ತರಿಸಿ ನದಿಗೆ ಎಸೆದ ಘಟನೆ ಮಂಡ್ಯದಲ್ಲಿ ನಡೆದಿದೆ.
ನಾಲ್ಕು ತಿಂಗಳ ಹಿಂದೆ ಅಂದರೆ ಕಳೆದ ನವೆಂಬರ್ನಲ್ಲಿ ಮಂಡ್ಯ ಜಿಲ್ಲೆಯ ಕೆಆರ್ಪೇಟೆ ತಾಲೂಕಿನ ಬಂಡಿಹೊಳೆ ಸಮೀಪ ಹೇಮಾವತಿ ನಾಲೆಯಲ್ಲಿ ಮಹಿಳೆಯೊಬ್ಬಳ ತುಂಡರಿಸಿದ ದೇಹ ಸಿಕ್ಕಿತ್ತು.
ಆದರೆ ಈ ಮಹಿಳೆ ಯಾರು ಎಂಬ ಬಗ್ಗೆ ಮಂಡ್ಯದ ಪೊಲೀಸರು ತಲೆಕೆಡಿಸಿಕೊಂಡಿದ್ದರು. ಏನು ಮಾಡಿದರೂ ಈಕೆ ಯಾರು ಎಂಬುದು ಪತ್ತೆಯಾಗಿರಲಿಲ್ಲ. ಇದರ ಬೆನ್ನತ್ತಿ ಹೋಗಿದ್ದ ಪೊಲೀಸರಿಗೆ ಇದೀಗ ನಾಲ್ಕು ತಿಂಗಳ ಬಳಿಕ ಅಂತೂ ರಹಸ್ಯವನ್ನು ಭೇದಿಸಿದ್ದಾರೆ.
ಪಾಂಡವಪುರದ ದೇಶವಳ್ಳಿ ಗ್ರಾಮದ ನಿವಾಸಿ ಆಶಾ ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದ್ದು, ಈಕೆಯ ಗಂಡ ರಂಗಪ್ಪ ಹಾಗೂ ಭಾವ ರಾಮಚಂದ್ರ ಕೊಲೆ ಮಾಡಿರುವುದು ತಿಳಿದುಬಂದಿದೆ.
ತಿಂಗಳು ಪಾಂಡವಪುರ ಪೊಲೀಸ್ ಠಾಣೆಗೆ ದೇಶವಳ್ಳಿ ಗ್ರಾಮದ ವ್ಯಕ್ತಿ ತನ್ನ ಮಗಳು ಆಶಾ 4 ತಿಂಗಳಿನಿಂದ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಾರೆ. ಈ ವೇಳೆ ಪಾಂಡವಪುರ ಪೊಲೀಸರು ಕೆಆರ್ಪೇಟೆ ಪೊಲೀಸ್ ಠಾಣೆಗೆ ಈ ಬಗ್ಗೆ ತಿಳಿಸಿದ್ದಾರೆ.
ಪೊಲೀಸರು ದೂರು ನೀಡಿದ ವ್ಯಕ್ತಿಯನ್ನು ವಿಚಾರಣೆ ಮಾಡುವ ವೇಳೆ ಹೇಮಾವತಿ ನಾಲೆಯಲ್ಲಿ ದೊರೆತ ತುಂಡರಿಸಿದ ದೇಹಗಳ ಫೋಟೋಗಳನ್ನು ತೋರಿಸಿದ್ದು, ಒಂದು ಕೈ ಮೇಲೆ ಇದ್ದ ಮೀನಿನ ಟ್ಯಾಟು ಇರುವ ಫೋಟೋವನ್ನು ನೋಡಿ ನನ್ನ ಮಗಳು ಇದು ಎಂದು ಗುರುತಿಸಿದ್ದಾರೆ.
ನಂತರ ಇದರ ಬೆನ್ನತ್ತಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಗಂಡ ಹಾಗೂ ಭಾವನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಬಾಯಿ ಬಿಡಿಸಿದ್ದಾರೆ. ಈ ವೇಳೆ ಇಬ್ಬರನ್ನು ವಿಚಾರಣೆ ಮಾಡಿದಾಗ, ಆಶಾ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು ಅದಕ್ಕೆ ನಾವು ದೇಶಹಳ್ಳಿಯ ಹೊರಗಡೆ ಕರೆದುಕೊಂಡು ಹೋಗಿ ಕಬ್ಬು ಕಡಿಯುವ ಮಚ್ಚಿನಿಂದ ಕೊಲೆ ಮಾಡಿದೆ. ಆಕೆ ದೆವ್ವವಾಗಿ ನಮ್ಮನ್ನ ಕಾಡಬಹುದು ಎಂದು ಆಕೆಯನ್ನು ತುಂಡು ತುಂಡಾಗಿ ಕತ್ತರಿಸಿ ನಾಲೆಗೆ ಎಸೆದೆವು ಎಂದು ಬಾಯಿ ಬಿಟ್ಟಿದ್ದಾರೆ.
ಆದರೆ ಆಶಾಳ ಸಂಬಂಧಿಕರು ರಂಗಪ್ಪ ರಾಮಚಂದ್ರನ ಮಗಳನ್ನು ಮದುವೆಯಾಗಬೇಕು ಎಂದುಕೊಂಡಿದ್ದ. ಇದೇ ಕಾರಣಕ್ಕೆ ಮನೆಯಲ್ಲಿ ಜಗಳವಾಗುತ್ತಿತ್ತು, ಈ ವೇಳೆ ನಿನ್ನ ಕತ್ತರಿಸಿಯಾದರು ಮದುವೆಯಾಗುತ್ತೇನೆ ಎಂದು ಆಶಾಳಿಗೆ ಬೆದರಿಕೆ ಹಾಕುತ್ತಿದ್ದ, ಇದೇ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಹೇಳುತ್ತಿದ್ದಾರೆ. ಇದೇ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.