ಯಾದಗಿರಿ ಜೆಸ್ಕಾಂ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ | Janata news
ಯಾದಗಿರಿ : ಯಾದಗಿರಿಯಲ್ಲೂ ಅಧಿಕಾರಿಗಳು ಜೆಸ್ಕಾಂ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ನಗರದ ಸಹರಾ ಕಾಲೋನಿಯಲ್ಲಿರುವ ಪತ್ತಾರ್ ನಿವಾಸದ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿ ಆಸ್ತಿ ಹೊಂದಿದ್ದ ದೂರು ಹಿನ್ನೆಲೆಯಲ್ಲಿ ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಮನೆ ಮೇಲೆ ಎಸ್ ಪಿ ಮಹೇಶ್ ಮೇಗಣ್ಣನವರ್ ಹಾಗೂ ಡಿವೈಎಸ್ಪಿ ಉಮಾಶಂಕರ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ಬೆಳಿಗ್ಗೆ 6:30 ರ ಸುಮಾರಿಗೆ ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ.
ಕಳೆದ 20 ವರ್ಷದಿಂದ ಯಾದಗಿರಿ ಕೆಇಬಿ ಕಚೇರಿಯಲ್ಲಿ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ರಾಜು ಪತ್ತಾರ ಮೇಲೆ, ಆದಾಯಕ್ಕೂ ಮೀರಿ ಹೆಚ್ಚು ಆಸ್ತಿ ಹೊಂದಿದ ದೂರುಗಳು ಕೇಳಿ ಬಂದ ಹಿನ್ನೆಲೆ, ಯಾದಗಿರಿ ನಗರದ ಸಹರಾ ಕಾಲೋನಿಯಲ್ಲಿರುವ ನಿವಾಸಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದೆ. ದಾಳಿಯಲ್ಲಿ ಅಪಾರ ಪ್ರಮಾಣದ ನಗದುಹಣ, ಚಿನ್ನಾಭರಣ ಪತ್ತೆಯಾಗಿದೆಂದು ಹೇಳಲಾಗುತ್ತಿದ್ದು ಅಧಿಕಾರಿಗಳು ದಾಖಲಾತಿಗಳನ್ನ ಪರಿಶೀಲನೆ ನಡೆಸಿದ್ದಾರೆ.