ಭೀಕರ ರಸ್ತೆ ಅಪಘಾತ; ಪಾದಚಾರಿ, ಬೈಕ್ ಸವಾರನ ದುರ್ಮರಣ | Janata news
ಚಿತ್ರದುರ್ಗ : ಕೋಟೆ ನಾಡು ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿ, ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ಮೃತರನ್ನು ದಾಸರ ಮುತ್ತಯ್ಯ (60), ಪವನ್ ಕುಮಾರ್ (25) ಎಂದು ಗುರುತಿಸಲಾಗಿದೆ.
ಪಾದಚಾರಿ ದಾಸರಿ ಮುತ್ತಯ್ಯ ರಸ್ತೆ ಬದಿಯಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ಸವಾರ ಪವನ್ ಕುಮಾರ್ ನಡುರಸ್ತೆಯಲ್ಲಿ ಬಿದ್ದಾರೆ. ಇದೇ ವೇಳೆ ವೇಗವಾಗಿ ಬರುತ್ತಿದ್ದ ಲಾರಿಯೊಂದು ಬೈಕ್ ಸವಾರನ ಮೇಲೆ ಹರಿದಿದೆ. ಪರಿಣಾಮ ಪಾದಚಾರಿ ಹಾಗೂ ಬೈಕ್ ಸವಾರ ಇಬ್ಬರೂ ಮೃತಪಟ್ಟಿದ್ದಾರೆ.
ಮೃತ ದೇಹಗಳು ಗುರುತಿಸಲು ಸಾಧ್ಯವಾಗದ ರೀತಿಯಲ್ಲಿ ಜಜ್ಜಿ ಹೋಗಿದೆ. ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಯುವಕರು ಬೈಕ್ ಮೂಲಕ ತೆರಳುತ್ತಿದ್ದರು ಎನ್ನಲಾಗಿದೆ.
ಇನ್ನು ಬೈಕ್ನಲ್ಲಿದ್ದ ಮೊತ್ತಬ್ಬ ಉದಯ್ ಕುಮಾರ್ ಎಂಬಾತನಿಗೂ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.