ಭಾಸ್ಕರ್ ಶೆಟ್ಟಿ ಪತ್ನಿ ಒಡೆತನದ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆ, ಮೂವರು ಸೆರೆ, ಇಬ್ಬರು ಮಹಿಳೆಯರ ರಕ್ಷಣೆ! | Janata news
ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಒಡೆತನದ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ಜಾಲಪತ್ತೆಯಾಗಿದೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಶೇಖರ್ ಶೆಟ್ಟಿ, ಜಾನ್ಸನ್ ಅಲ್ಮೇಡಾ ಮತ್ತು ಹರ್ಷಿತ್ ಶೆಟ್ಟಿ ಎಂಬುವವರನ್ನು ಬಂಧಿಸಲಾಗಿದೆ. ಮೂವರೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪವಿದ್ದು ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜೇಶ್ವರಿ ಶೆಟ್ಟಿ ಮಾಲೀಕತ್ವದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆಯಾಗಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜೇಶ್ವರಿ ಶೆಟ್ಟಿ ಮೇಲೆಯೂ ಪ್ರಕರಣವನ್ನು ದಾಖಲು ಮಾಡಲಾಗಿದೆ.
ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಜ್ಯೋತಿಷಿ ನಿರಂಜನ್ ಭಟ್ ಜೊತೆ ಸೇರಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಹತ್ಯೆ ಮಾಡಿದ್ದರು ಎಂಬ ಆರೋಪವಿದೆ.. 2016ರ ಜುಲೈ 28ರಂದು ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ಶವವನ್ನು ಹೋಮಕುಂಡದಲ್ಲಿ ಹಾಕಿ ಸುಡಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ರಾಜೇಶ್ವರಿ ಶೆಟ್ಟಿ ಬಂಧನವಾಗಿತ್ತು. ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದಾರೆ.