ಪುತ್ರಿಯೊಂದಿಗೆ ದಂಪತಿ ಸಾಗುತ್ತಿದ್ದ ಬೈಕ್ಗೆ ಲಾರಿ ಡಿಕ್ಕಿ, 3 ವರ್ಷದ ಮಗುವಿನ ಮೈಮೇಲೇ ಲಾರಿ ಚಲಿಸಿ ಮಗು ಸ್ಥಳದಲ್ಲೇ ಸಾವು! | Janata news
ನೆಲಮಂಗಲ: : ಬೈಕ್ಗೆ ಲಾರಿ ಡಿಕ್ಕಿಯಾಗಿ ಕೆಳಕ್ಕೆ ಬಿದ್ದ ಮಗುವಿನ ಮೇಲೆಯೇ ಲಾರಿ ಚಲಿಸಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನೆಲಮಂಗಲದ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು ರಸ್ತೆಯ ನೆಲಮಂಗಲದ ಹುರುಳಿಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.
ದಾಸನಪುರದ ಶ್ರೀನಿವಾಸಮೂರ್ತಿ ಹಾಗೂ ಕಲಾವತಿ, ಅವರ ಪುತ್ರಿ ಶ್ರಾವಣಿ (3) ಬೈಕ್ ನಲ್ಲಿ ಮದುವೆಗಾಗಿ ಬೈಕ್ನಲ್ಲಿ ಹೋಗುತ್ತಿದ್ದರು. ಆಗ ನೆಲಮಂಗಲದ ಹುರುಳಿಹಳ್ಳಿ ಗೇಟ್ ಬಳಿ ಲಾರಿ ಬಂದು ಬೈಕ್ ಡಿಕ್ಕಿಯಾಗಿದೆ. ಮೂರು ವರ್ಷದ ಶ್ರಾವಣಿ ಬೈಕ್ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಅವಳ ಮೇಲೆ ಲಾರಿ ಸಾಗಿಹೋಗಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಬೈಕ್ನಲ್ಲಿದ್ದ ದಂಪತಿ ಶ್ರೀನಿವಾಸ ಮೂರ್ತಿ ಮತ್ತು ಕಲಾವತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಮತ್ತು ಅದರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.