ಉಪಚುನಾವಣೆಗೆ ಕೊರೊನಾ ಕಠಿಣ ನಿಯಮಗಳು ಅಪ್ಲೈ ಆಗಲ್ಲ: ಸಿಎಂ ಬಿಎಸ್ವೈ | Janata news
ತುಮಕೂರು : ಉಪಚುನಾವಣೆಗೆ ಕಠಿಣ ನಿಯಮಗಳು ಅಪ್ಲೈ ಆಗೋದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಪಟೂರಿನಲ್ಲಿ ಹಲವು ಸರ್ಕಾರಿ ಕಚೇರಿಗಳನ್ನ ಉದ್ಘಾಟನೆ ಮಾಡಿದರು. ರಂಗಾಪುರ ಮಠದ ಅತಿಥಿ ಗೃಹಗಳ ಸಮುಚ್ಚಯ, ತಿಪಟೂರು ನಗರದಲ್ಲಿನ ಮಿನಿ ವಿಧಾನಸೌಧ, ಆರ್.ಎಫ್.ಓ ಕಚೇರಿ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದರು.
ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕಾರ್ಯಕ್ರಮಕ್ಕೆ ಮಿತಿ ಷರತ್ತು ಹಾಕಿದ್ದೇವೆ. ಸಾರ್ವಜನಿಕ ಸಭೆಗಳಿಗೆ ಯಾವುದೇ ನಿಬಂಧನೆ ಹಾಕಿಲ್ಲ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಂಡು ಎಚ್ಚರಿಕೆಯಿಂದ ಕಾರ್ಯಕ್ರಮ ಮಾಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ.
ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಂಡು ಎಚ್ಚರಿಕೆಯಿಂದ ಕಾರ್ಯಕ್ರಮ ಮಾಡಬಹುದು. ಸದ್ಯ ಶಾಲಾ ಕಾಲೇಜು ಬಂದ್ ಮಾಡುವ ಯೋಚನೆ ಇಲ್ಲ, ಒಂದು ಕಾದು ನೋಡುತ್ತೇವೆ. ಜನ ಸುಧಾರಿಸದೇ ಇದ್ದರೆ, ಕೊರೊನಾ ಪ್ರಕರಣಗಳು ಹೆಚ್ಚಾದರೆ ಪರಿಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕೋವಿಡ್ ಹಣ ದುರುಪಯೋಗ ಆರೋಪಕ್ಕೆ ಸದನದಲ್ಲಿ ಈ ಕುರಿತು ಹೇಳಿಕೆ ಕೊಟ್ಟಿದ್ದೇವೆ. ಸಾಕ್ಷ್ಯಾಧಾರವಿಲ್ಲದೇ ಆರೋಪ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯರಿಗೆ ಸಿಎಂ ತಿರುಗೇಟು ನೀಡಿದರು.