ನಾಯಿಯನ್ನು ಅಟ್ಟಾಡಿಸಿಕೊಂಡು ಮನೆಗೆ ಬಂದ ಚಿರತೆ: ಮುಂದೇನಾಯ್ತು? | Janata news
ಉಡುಪಿ : ಆಹಾರ ಹುಡುಕಿ ಬಂದಿದ್ದ ಚಿರತೆಯೊಂದು ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ಬ್ರಹ್ಮಾವರ ತಾಲೂಕಿನ ನೈಲಾಡಿ ಸಮೀಪ ನಡೆದಿದೆ.
ಇಂದು ಬೆಳಗ್ಗಿನ ಜಾವ ಆಹಾರ ಹುಡುಕತ್ತಾ ಬಂದಿದ್ದ ಚಿರತೆ ಸಾಕು ನಾಯಿಯ ಬೇಟೆಗೆ ಮುಂದಾಗಿದೆ. ಈ ವೇಳೆ ಹೆದರಿದ ನಾಯಿ ಮನೆಯ ಕೋಣೆಯೊಳಗೆ ನುಗ್ಗಿದೆ. ನಾಯಿಯನ್ನೇ ಬೆನ್ನಟ್ಟಿ ಚಿರತೆ ಕೊಠಡಿಗೆ ಹೋಗಿದೆ.
ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆ ಬಾಗಿಲು ಹಾಕಿದ್ದಾರೆ. ಬಳಿಕ ವಿಷಯವನ್ನು ಸ್ಥಳೀಯ ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಸತತ ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ, ಬೋನ್ ಇಟ್ಟು ಅರಣ್ಯ ಇಲಾಖೆ ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದಿದ್ದಾರೆ.
English summary :Udupi