100 ಕೋಟಿ ಲಂಚ ಪ್ರತಿ ತಿಂಗಳು ಸಂಗ್ರಹ : ಮಹಾರಾಷ್ಟ್ರ ಗೃಹ ಸಚಿವ ದೇಶಮುಖ್ ವಿರುದ್ಧ ಆರೋಪದ ಕುರಿತು ಆಘಾಡಿ ಸಭೆ | Janata news
ಮುಂಬೈ : ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಮುಂಬೈ ನಗರದ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಮಾಡಿರುವ ಆರೋಪಗಳ ಕುರಿತಾಗಿ ತೀರ್ಮಾನ ಕೈಗೊಳ್ಳಲು ಮೈತ್ರಿಕೂಟದ ನಾಯಕರು ನವದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ, ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ಅವರ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಬಗ್ಗೆ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತೆಗೆದುಕೊಳ್ಳಲಿದ್ದಾರೆ, ಎಂದು ಮಿತ್ರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಪ್ರತಿ ತಿಂಗಳೂ ₹100 ಕೋಟಿ ಲಂಚ ಸಂಗ್ರಹಿಸುವಂತೆ ಅಮಾನತುಗೊಂಡಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಸೂಚಿಸಿದ್ದರು, ಎಂದು ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಆರೋಪಿಸಿದ್ದಾರೆ.
ಪರಮ್ ಬೀರ್ ಸಿಂಗ್ ಅವರು ಮಾಡಿರುವ ಆರೋಪಗಳ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿದ್ದೇನೆ. ಈ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲು ಮಾಜಿ ಐಪಿಎಸ್ ಅಧಿಕಾರಿ ಜ್ಯುಲಿಯೊ ರಿಬೈರೊ ಅವರ ನೆರವು ಪಡೆಯುವಂತೆ ಸಲಹೆ ನೀಡಿದ್ದೇನೆ, ಎಂದು ತಿಳಿಸಿದ್ದಾರೆ.
ದೇಶ್ಮುಖ್ ವಿರುದ್ಧದ ಆರೋಪಗಳು ಗಂಭೀರವಾಗಿದೆ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ನಿರ್ಗಮಿಸಬೇಕು ಎಂದು ಭಾವಿಸಿದ್ದಾರೆ, ಎಂದು ಮಹಾರಾಷ್ಟ್ರ ಮೈತ್ರಿಕೂಟದ ಹಿರಿಯ ನಾಯಕರು ಹೇಳಿದ್ದಾರೆ. ಈ ಆರೋಪಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸುವುದು ಅಗತ್ಯವಾಗಿದೆ, ಎಂದು ಅವರು ಪ್ರತಿಪಾದಿಸಿದ್ದಾರೆ.