ಶಿರಸಿಯ ಮತ್ತಿಘಟ್ಟದ ಬಳಿ ಭೂ ಕುಸಿತ: ಅಡಿಕೆ ತೋಟಕ್ಕೆ ಹಾನಿ | Janata news
ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮತ್ತಿಘಟ್ಟದ ಕೃಷಿ ಜಮೀನಿನಲ್ಲಿ ಭೂಕುಸಿತ ಸಂಭವಿಸಿದೆ.
ಕಳೆದ ಬಾರಿ ಸುರಿದ ಭಾರಿ ಮಳೆಗೆ ಬಿರುಕು ಬಿಟ್ಟಿದ್ದ ಭೂಮಿ ಇಂದು ದಿಢೀರ್ ಕುಸಿದು ಅಡಿಕೆ ತೋಟಕ್ಕೆ ಹಾನಿಯಾಗಿರುವ ಘಟನೆ ಶಿರಸಿ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ನಡೆದಿದೆ.
ಮತ್ತಿಘಟ್ಟ ಗ್ರಾಮದ ಕೆಳಗಿನಕೇರಿಯ ಮಧುಸೂದನ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಸುಮಾರು ಒಂದು ಎಕರೆ ಅಡಿಕೆ ತೋಟನಾಶವಾಗಿದ್ದು 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
RELATED TOPICS:
English summary :Uttara kannada