ಪ್ರಿಯತಮೆಯನ್ನು ಓಲೈಸಿಕೊಳ್ಳಲು ಆಕೆಯ ಮಗನನ್ನೇ ಕಿಡ್ನ್ಯಾಪ್ ಮಾಡಿ ಕೊಂದು ಮೂಟೆಕಟ್ಟಿ ಎಸೆದ ಪ್ರಿಯಕರ! | Janata news
ಚಿಕ್ಕಬಳ್ಳಾಪುರ : 6 ವರ್ಷದ ಮಗು ಕೊಲೆಯಾಗಿರುವ ಘಟನೆ ಗೌರಿಬಿದನೂರು ತಾಲೂಕಿನಲ್ಲಿ ಸಂಭವಿಸಿದೆ. ಗೌರಿಬಿದನೂರು ತಾಲೂಕಿನ ಸಾದರ್ಲಹಳ್ಳಿ ಬಳಿ ಅಸ್ಥಿಪಂಜರ ಪತ್ತೆಯಾಗಿದೆ.
ವಾಟದಹೊಸಹಳ್ಳಿಯ ನಾರಾಯಣಸ್ವಾಮಿ ಮತ್ತು ಪ್ರಭಾವತಿ ದಂಪತಿಯ ಮಗು ವಿಷ್ಣುವರ್ಧನ್(6) ಮೃತ ದುರ್ದೈವಿ. ಮಾ.16ರಂದು ವಿಷ್ಣುವರ್ಧನ್ ನಾಪತ್ತೆಯಾಗಿದ್ದ. ಪಾಲಕರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು.
ಘಟನೆ -
ಪ್ರಭಾವತಿ ಹಾಗೂ ರಾಮಾಂಜಿ ನಡುವೆ ಅನೈತಿಕ ಸಂಬಂಧ ಇತ್ತು. ಇತ್ತೀಚೆಗೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಮೂಡಿ ಬೇರೆಯಾಗಿದ್ದರು. ಅದೇ ದ್ವೇಷ ಹಾಗೂ ಮತ್ತೆ ಪ್ರಭಾವತಿ ಒಲಿಸಿಕೊಳ್ಳಲು ವಿಷ್ಣುವರ್ಧನ್ನನ್ನು ರಾಮಾಂಜಿ ಅಪಹರಿಸಿದ್ದಾನೆ.
ಇತ್ತ ಮಗ ನಾಪತ್ತೆಯಾಗಿದ್ದಾನೆ ಎಂದು ಪ್ರಭಾವತಿ ಮತ್ತು ನಾರಾಯಣಸ್ವಾಮಿ ಇತ್ತ ದೂರು ಕೊಟ್ಟಿದ್ದರು. ಪೊಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಪ್ರಕರಣ ದಾಖಲಾಗಿದ್ದಕ್ಕೆ ಆರೋಪಿ ರಾಮಾಂಜಿ ಬಾಲಕ ವಿಷ್ಣುವರ್ಧನ್ನ ಕತ್ತು ಹಿಸುಕಿ ಕೊಲೆ ಮಾಡಿ, ಮೂಟೆಯಲ್ಲಿ ಹಾಕಿ ಬಿಸಾಡಿದ್ದ.
ವಿಚಾರಣೆ ವೇಳೆ ಸತ್ಯ ಬಯಲಾಗಿದ್ದು, ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಾಲಕ ಅಸ್ಥಿಪಂಜರ ಪತ್ತೆಯಾಗಿದೆ. ಆರೋಪಿ ರಾಮಾಂಜಿಯನ್ನ ಗೌರಿಬಿದನೂರು ಪೊಲೀಸರು ಬಂಧಿಸಿದ್ದಾರೆ.