ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬೇಕು: ಸಿದ್ದರಾಮಯ್ಯ ಆಗ್ರಹ | Janata news
ಕಲಬುರಗಿ : ಸಿಡಿ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅತ್ಯಾಚಾರದ ಪ್ರಕರಣವೆಂದು ಅರ್ಟಿಲ್ 376ರ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜಾರಕಿಹೊಳಿ ಪ್ರಕರಣದಲ್ಲಿ ಎಫ್ ಐಆರ್ ದಾಖಲು ಮಾಡುವಂತೆ ಮೊದಲೇ ಆಗ್ರಹಿಸಿದ್ದೆ. ಆದರೆ ಈಗ ಯುವತಿ ಪದೇ ಪದೇ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಈ ಪ್ರಕರಣ ಎಸ್ ಐಟಿಯಿಂದ ಸರಿಯಾಗಿ ತನಿಖೆ ಆಗುತ್ತದೆ ಎನ್ನುವ ಭರವಸೆ ನನಗಿಲ್ಲ ಆದ್ದರಿಂದ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ತನಿಖೆ ನಡೆಯಲಿ ಎಂದು ಒತ್ತಾಯಿಸಿದ್ದಾರೆ.
ಯುವತಿ ನಿರ್ಭಯವಾಗಿ ನ್ಯಾಯಾಲಯದ ಮುಂದೆ ಬಂದು ಹೇಳಿಕೆ ನೀಡಲಿ. ಅಲ್ಲದೆ ಆಕೆಯ ಕುಟುಂಬದ ಹೇಳಿಕೆಗಳು ಒತ್ತಡದಲ್ಲೂ ಬರುತ್ತಿರಬಹುದು. ಆದ್ದರಿಂದ ಪ್ರಕರಣದ ತನಿಖೆ ಸರಿಯಾಗಿ ಮತ್ತು ನ್ಯಾಯ ಸಮ್ಮತ ರೀತಿಯಲ್ಲಿ ಆಗಬೇಕು ಎಂದು ಆಗ್ರಹಿಸಿದ್ದಾರೆ.