ನಡು ರಸ್ತೆಯಲ್ಲೇ ಡ್ಯಾಗರ್ನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ | ಜನತಾ ನ್ಯೂಸ್
ಮಂಡ್ಯ : ದುರ್ಷರ್ಮಿಗಳು ಡ್ಯಾಗರ್ನಿಂದ ಇರಿದು ವ್ಯಕ್ತಿಯೊಬ್ಬರನ್ನ ಹತ್ಯೆಗೈದು ತದನಂತರ ಆತನ ಬಳಿ ಇದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ದಳವಾಯಿಕೋಡಿಹಳ್ಳಿ ಗ್ರಾಮದ ಮಧು (30) ರಸ್ತೆ ಬದಿಯಲ್ಲಿ ನಿಂತುಕೊಂಡು ತನ್ನ ಸ್ನೇಹಿತರೊಂದಿಗೆ ಮಾತನಾಡುವ ವೇಳೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಡ್ರಾಗರ್ ನಲ್ಲಿ ಹೊಟ್ಟೆಯ ಭಾಗಕ್ಕೆ ಚುಚ್ಚಿದ್ದಾರೆ. ಬಳಿಕ ಅವರ ಮೈ ಮೇಲೆ ಇದ್ದ ಚಿನ್ನಾಭರಣಗಳನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಧುವನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ, ಆದರೆ ಮಾರ್ಗ ಮಧ್ಯೆದಲ್ಲಿ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.