ಪಾನ ಮತ್ತ ವ್ಯಕ್ತಿಯಿಂದ ಹೀನ ಕೃತ್ಯ: ಮನೆಗೆ ಬೀಗ ಹಾಕಿ ಬೆಂಕಿ, 6 ವರ್ಷದ ಬಾಲಕಿ ಸೇರಿ ಆರು ಜನರು ಬೆಂಕಿಗೆ ಆಹುತಿ | ಜನತಾ ನ್ಯೂಸ್
ಕೊಡಗು : ಪೊನ್ನಂಪೇಟೆ ತಾಲ್ಲೂಕಿನ ಮುಗಟಗೇರಿ ಗ್ರಾಮದ ಕಾಫಿ ತೋಟದ ಲೈನ್ಮನೆಯಲ್ಲಿ ಮಲಗಿದ್ದ ವೇಳೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದರಿಂದ ಮೂವರು ಸಜೀವ ದಹನವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಕಂಠಪೂರ್ತಿ ಕುಡಿದು ಬಂದ ಎರವರ ಭೋಜ ಎಂಬಾತ ಎರವರ ಮಂಜು ಎಂಬುವವರ ಮನೆಯನ್ನು ಹೊರಗಡೆಯಿಂದ ಲಾಕ್ ಮಾಡಿ ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದಿದ್ದಾನೆ. ಇದರಿಂದಾಗಿ ಮನೆಯೊಳಗೆ ನಿದ್ರಿಸುತ್ತಿದ್ದವರು ಬೆಂಕಿಗೆ ಆಹುತಿಯಾಗಿದ್ದಾರೆ. ಒಟ್ಟು ಎಂಟು ಜನರ ಪೈಕಿ ಮೂವರು ಸಜೀವ ದಹನವಾಗಿದ್ದು, ಮೂವರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಇನ್ನುಳಿದ ಇಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಂಠಪೂರ್ತಿ ಕುಡಿದುಬಂದ ಬೋಜ ಮನೆಯ ಹೊರಗಿನಿಂದ ಬೆಂಕಿ ಹಚ್ಚಿದ ವೇಳೆ ಮನೆಯೊಳಗಿದ್ದವರು ನಿದ್ರಿಸುತ್ತಿದ್ದರು. ಆತ ಹೊರಗಿನಿಂದ ಬಾಗಿಲು ಹಾಕಿ ಬೆಂಕಿ ಹಚ್ಚಿದ ಪರಿಣಾಮ ಬೇಬಿ(45), ಸೀತೆ(40), ಪ್ರಾರ್ಥನಾ(6) ಸಜೀವ ದಹನವಾಗಿದ್ದು, ವಿಶ್ವಾಸ್(3), ವಿಶ್ವಾಸ್(6), ಪ್ರಕಾಶ್(7) ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾಗ್ಯ (40) ಪಾಚೆ (60) ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಕಿಯ ಕಿನ್ನಾಲಿಗೆ ಮನೆಯೊಳಗಿದ್ದ 6 ಜೀವಗಳು ಬೆಂದುಹೋಗಿವೆ. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.