ಬಾಡಿ ಬಿಲ್ಡರ್ ಕೊಲೆ ಪ್ರಕರಣ, ನಗರ ಬಂದ್ಗೆ ಕರೆ | ಜನತಾ ನ್ಯೂಸ್
ಚಿಕ್ಕಮಗಳೂರು : ಚಿಕ್ಕಮಗಳೂರು ನಗರದಲ್ಲಿ ಬಾಡಿ ಬಿಲ್ಡರ್ ಆಗಿದ್ದ ಯುವಕನ ಕೊಲೆ ನಡೆದಿದೆ. ಹಿಂದೂಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಯುವಕನ ಕೊಲೆ ಖಂಡಿಸಿ ಚಿಕ್ಕಮಗಳೂರು ನಗರ ಬಂದ್ಗೆ ಕರೆ ನೀಡಲಾಗಿದೆ.
ಬಾಡಿ ಬಿಲ್ಡರ್ ಆಗಿದ್ದ 21 ವರ್ಷದ ಅಯ್ಯಪ್ಪ ನಗರದ ಯುವಕ ಮನು ಮೇಲೆ ಬುಧವಾರ ಹಲ್ಲೆ ನಡೆಸಲಾಗಿತ್ತು. ಆದರೆ ಗುರುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮನು ಮೃತಪಟ್ಟಿದ್ದಾನೆ.
ನಗರದ ಅಯ್ಯಪ್ಪ ನಗರದ ಮನು ಕೊಲೆಯಾದ ಯುವಕ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನ್ಯಕೋಮಿನ ಯುವಕರು ಮನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಮಿಸ್ಟರ್ ಚಿಕ್ಕಮಗಳೂರು ಬಾಡಿ ಬಿಲ್ಡರ್ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ. ಕೊಲೆ ಖಂಡಿಸಿ ಚಿಕ್ಕಮಗಳೂರು ನಗರದ ಎಂ. ಜಿ. ರಸ್ತೆಯಲ್ಲಿ ಅಂಗಡಿಗಳ ಬಾಗಿಲು ಹಾಕಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.