ಮನನೊಂದು ಕೆಎಸ್ಆರ್ಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನ! | ಜನತಾ ನ್ಯೂಸ್
ಮಂಡ್ಯ : ವರ್ಗಾವಣೆ ಅಸ್ತ್ರಕ್ಕೆ ಆತಂಕಗೊಂಡ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಾರಿಗೆ ನೌಕರನೊಬ್ಬ ವಿಷಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಳವಳ್ಳಿ ಪಟ್ಟಣದ ಕೆಎಸ್ಆರ್ಟಿಸಿ ಡಿಪೋ ಹಿಂಭಾಗ ನಡೆದಿದೆ.
ಮಳವಳ್ಳಿ ಕೆಎಸ್ಆರ್ಟಿಸಿ ಡಿಪೋದ ಚಾಲಕ ಕಂ ನಿರ್ವಾಹಕ ರವಿಶಂಕರ್(54) ಆತ್ಮಹತ್ಯೆಗೆ ಯತ್ನಿಸಿದವ. ಮಳವಳ್ಳಿ ಪಟ್ಟಣದ ಸಿದ್ಧಾರ್ಥ ನಗರದಲ್ಲಿ ವಾಸವಾಗಿದ್ದರು.
2 ದಿನದ ಹಾಜರಾತಿ ಕಡಿತ ಮತ್ತು ತಮ್ಮ 4 ಮಂದಿ ಸಹಪಾಠಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ತನ್ನನ್ನೂ ವರ್ಗಾವಣೆ ಮಾಡಬಹುದು ಎಂಬ ಆತಂಕದಲ್ಲಿ ಬೆಳೆ ಔಷಧ ಸೇವಿಸಿ ರವಿಶಂಕರ್ ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತಕ್ಷಣ ಸಾರಿಗೆ ನೌರರನನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.