ವಜಾಗೊಂಡ ಸಾರಿಗೆ ನೌಕರರು ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಲಿ: ಸಚಿವ ಶಿವರಾಮ ಹೆಬ್ಬಾರ್ | ಜನತಾ ನ್ಯೂಸ್
ಕಲಬುರ್ಗಿ : ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಸೇವೆಯಿಂದ ವಜಾಗೊಂಡ ಮುಷ್ಕರ ನಿತರ ನೌಕರರು ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಲಿ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದಂತ ಅವರು, ಸಾರಿಗೆ ನೌಕರರ ಮುಷ್ಕರದಿಂದಾಗಿ ನಿತ್ಯ ಇಲಾಖೆಗೆ 3,800 ಕೋಟಿ ರೂಪಾಯಿ ನಷ್ಟ ಉಂಟಾಗುತ್ತಿದೆ. ಸಂಕಷ್ಟದಲ್ಲಿದ್ದಂತ ಸಾರಿಗೆ ನಿಮಗಳಿಗೆ ಸರ್ಕಾರ 4 ಸಾವಿರ ಕೋಟಿ ಹಣ ನೀಡಿ ನೌಕರರ ನೆರವಿಗೆ ಸ್ಪಂದಿಸಿತ್ತು. ಉಪ ಚುನಾವಣೆಯ ಹಿನ್ನಲೆಯಲ್ಲಿ ಸರ್ಕಾರ ಸದ್ಯಕ್ಕೆ ಯಾವುದೇ ನಿರ್ಧಾರ ಪ್ರಕಟಿಸೋದಕ್ಕೆ ಆಗ್ತಾ ಇಲ್ಲ.
ಸಾರಿಗೆ ನೌಕರರ ಮುಷ್ಕರವೇ ಕಾನೂನು ಬಾಹಿರವಾಗಿದೆ. ಅವರು ರಾಜಕೀಯ ಪ್ರೇರಿತವಾಗಿ ಮುಷ್ಕರ ನಡೆಸುತ್ತಿದ್ದಾರೆ. ನಾವು ಮಾತುಕತೆಗೆ ಕರೆದರೂ ಬಂದಿಲ್ಲ ಎಂದರು.
ಸದ್ಯದ ಬೇಡಿಕೆಯಾದ ವೇತನ ಪರಿಷ್ಕರಣೆ ಬಗ್ಗೆಯೂ ಮೇ 5ರ ನಂತರ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವರು ಈಗಾಗಲೇ ಹೇಳಿದ್ದಾರೆ. ಆದರೂ, ಸಂಧಾನಕ್ಕೆ ಬಾರದೇ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಅನ್ಯಮಾರ್ಗವಿಲ್ಲದೇ ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದರು.