ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ | ಜನತಾ ನ್ಯೂಸ್
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಎಸ್ಐಟಿ ಮುಂದೆ ಸಿಡಿ ಸಂತ್ರಸ್ತ ಯುವತಿ ಉಲ್ಟಾಹೊಡೆದಿದ್ದಾರೆ ಎನ್ನಲಾಗಿದೆ.
ನನ್ನನ್ನು ಹನಿ ಟ್ರ್ಯಾಪ್ಗೆ ಬಳಿಸಿಕೊಂಡು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂದು ಕಿಂಗ್ ಪಿನ್ಸ್ ನರೇಶ್, ಶ್ರವಣ್ ವಿರುದ್ಧ ಸಿಡಿ ಲೇಡಿ ಸ್ಫೋಟಕ ಆರೋಪ ಮಾಡಿದ್ದಾಳೆ.
ರಮೇಶ್ ಜಾರಕಿಹೊಳಿ ವಿರುದ್ಧ ನನ್ನ ಹೇಳಿಕೆ ಪೂರ್ಣ ಸತ್ಯ ಅಲ್ಲ. ನಾನು ಹನಿಟ್ರ್ಯಾಪ್ ಆಗಿದ್ದೆ. ನರೇಶ್ ಹಾಗೂ ಶ್ರವಣ್ ನನ್ನನ್ನು ಆ ರೀತಿ ಬಳಸಿಕೊಂಡರು. ನರೇಶ್ ಮತ್ತು ಶ್ರವಣ್ ಹೇಳಿದಂತೆ ನಾನು ನಡೆದುಕೊಂಡೆ. ಈ ಹಿಂದೆ ಒತ್ತಡದಲ್ಲಿದ್ದರಿಂದ ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿ ಕವಿತಾ ಮುಂದೆ ಯುವತಿ ನೀಡಿರುವ ಹೇಳಿಕೆಯನ್ನು ಕ್ಯಾಮೆರಾದಲ್ಲಿ ಎಸ್ಐಟಿ ರೆಕಾರ್ಡ್ ಮಾಡಿಕೊಂಡಿದೆ ಎಂಬುದಾಗಿ ಉಲ್ಟಾಹೊಡೆದಿದ್ದಾರೆ ಎನ್ನಲಾಗಿದೆ. ಈ ಮೂಲಕ ಸಿಡಿ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಡಿ ಯುವತಿಯನ್ನು ಇದೀಗ ಮತ್ತೊಮ್ಮೆ ಜಡ್ಜ್ ಮುಂದೆ ಹಾಜರುಪಡಿಸಲು SIT ಸಿದ್ಧತೆ ಮಾಡಿಕೊಳ್ಳುತ್ತಿದೆ.