ಕರ್ನಾಟಕದಲ್ಲೂ ಎಸ್ಎಸ್ಎಲ್ಸಿ ಪರೀಕ್ಷೆ ರದ್ದುಗೊಳ್ಳುತ್ತಾ? ಶಿಕ್ಷಣ ಸಚಿವರಿಂದ ಇಂದು ಮಹತ್ವದ ಸಭೆ | ಜನತಾ ನ್ಯೂಸ್
ಬೆಂಗಳೂರು : CBSE 10ನೇ ತರಗತಿ ಪರೀಕ್ಷೆಗಳನ್ನು ಕೇಂದ್ರೀಯ ಶಿಕ್ಷಣ ಇಲಾಖೆ ರದ್ದುಗೊಳಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಎಸ್ಎಸ್ಎಲ್ಸಿ ಪರೀಕ್ಷೆ ರದ್ದುಗೊಳ್ಳುತ್ತಾ? ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ.
ಈಗಾಗಲೇ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಸ್ಫೋಟಗೊಳ್ಳಲಿದ್ದು, ದಿನನಿತ್ಯ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಮಧ್ಯೆ 1ರಿಂದ 9ನೇ ತರಗತಿ ಮೌಲ್ಯಂಕನ ಪರೀಕ್ಷೆ ನಿರ್ಧಾರವಾಗಿಲ್ಲ. ಹೀಗಾಗಿ ಇಂದು ನಡೆಯಲಿರುವ ಸಭೆಯಲ್ಲಿ ಮೌಲ್ಯಂಕನ ಪರೀಕ್ಷೆ ಕುರಿತು ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ.
ಈಗಾಗಲೇ CBSE 10ನೇ ತರಗತಿ ಪರೀಕ್ಷೆಗಳನ್ನು ಕೇಂದ್ರೀಯ ಶಿಕ್ಷಣ ಇಲಾಖೆ ರದ್ದುಗೊಳಿಸಿದೆ. ಕೊರೋನಾ ಎರಡನೇ ಅಲೆ ಆತಂಕದಿಂದ 1ರಿಂದ 9ನೇ ತರಗತಿ ಮಕ್ಕಳಿಗೆ ಈ ವರ್ಷವೂ ಪರೀಕ್ಷೆ ನಡೆಯೋದು ಅನುಮಾನ ಎನ್ನಲಾಗಿದೆ.