ಬೆಂಗಳೂರಿಗೆ ಲಾಕ್ ಡೌನ್ ಅನಿವಾರ್ಯವಿದೆ : ಸಲಹೆ ನೀಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಕೊರೊನಾ ಸೋಂಕಿನ ಎರಡನೆಯ ಅಲೆ ವಿಪರೀತವಾಗಿದೆ. ಅದಕ್ಕೆ ಕಡಿವಾಣ ಹಾಕಬೇಕೆಂದರೆ ನೈಟ್ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಹಾಗಾಗಿ ಲಾಕ್ಡೌನ್ ಮಾಡಿ, ಲಾಕ್ಡೌನ್ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
15 ದಿನಗಳ ಕಾಲ ಲಾಕ್ ಡೌನ್ ಮಾಡಬೇಕು. ಆದ್ರೆ ಲಾಕ್ ಡೌನ್ ಮಾಡಿದ್ರೆ ಬಡವರಿಗೆ ಒಂದು ತಿಂಗಳು ಆರ್ಥಿಕ ಸಹಾಯ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಜನರ ಜೀವನದ ಜೊತೆ ಚೆಲ್ಲಾಟ ಆಡಬೇಡಿ. ಜನರ ಜೀವನ ಉಳಿಸುವುದು ಸರ್ಕಾರದ ಆದ್ಯ ಕರ್ತವ್ಯ. ನಾನು ಯಾರ ಬಗ್ಗೆಯೂ ಸಹ ಆಕ್ಷೇಪ ಮಾಡಲ್ಲ. ಕೆಲವರು ಆಕ್ಷೇಪ ಎತ್ತಿದರೂ ಮೊದಲು ಲಾಕ್ಡೌನ್ ಮಾಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ವೈಜ್ಞಾನಿಕವಾಗಿ 15 ದಿನ ಲಾಕ್ಡೌನ್ ಮಾಡಿ. ಕಾಟಾಚಾರಕ್ಕೆ ಒಂದು ವಾರ ಮಾಡುವುದಲ್ಲ. ಕೊರೊನಾ ಸೋಂಕಿನ ಚೈನ್ ಮುರಿಯಬೇಕು ಅಂದ್ರೆ 15 ದಿನ ಲಾಕ್ಡೌನ್ ಮಾಡಿ ಎಂದು ಸ್ಪಷ್ಟ ಮಾತಿನಲ್ಲಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.