ಈಜಲು ಹೋದ ಯುವಕರಿಬ್ಬರು ನೀರು ಪಾಲು! | ಜನತಾ ನ್ಯೂಸ್
ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಾಳಮ್ಮನ ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದ ಯುವಕರಿಬ್ಬರು ನೀರುಪಾಲಾಗಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಲ್ಲಿನಾಥಪುರ ಗ್ರಾಮದ ಬಸವೇಗೌಡ (26), ಜವರೇಗೌಡ (34) ಎಂಬವರು ಕೆಆರ್ಎಸ್ ಬಳಿ ಇರುವ ಕಾಳಮ್ಮನ ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದರು.
ಪೂಜೆಗೆ ಬಂದಿದ್ದ ಇವರು ಕೆಆರ್ಎಸ್ನ ನಾರ್ಥ್ ಬ್ಯಾಂಕ್ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋಗಿದ್ದರು. 2500 ಕ್ಯೂಸೆಕ್ ನೀರು ಹರಿಯುವ ವಿಸಿ ನಾಲೆ ಇದಾಗಿದ್ದು, ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾರೆ.
ಓರ್ವನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ. ಯುವಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Mandya