ಲಾರಿ, ಟಾಟಾ ಏಸ್, ಬೈಕ್ ನಡುವ ಸರಣಿ ಅಪಘಾತ: ಇಬ್ಬರು ಗಂಭೀರ! | ಜನತಾ ನ್ಯೂಸ್
ಮಂಗಳೂರು : ಲಾರಿ, ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಸರಣಿ ಅಪಘಾತವಾದ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆಯಲ್ಲಿ ಸಂಭವಿಸಿದೆ.. ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಮತ್ತು ಮಾಣಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಟಾಟಾ ಏಸ್ ವಾಹನ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಈ ವೇಳೆ ಟಾಟಾ ಏಸ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ನಿಯಂತ್ರಣ ಕಳೆದು ಟಾಟಾ ಏಸ್ಗೆ ಢಿಕ್ಕಿಯಾಗಿದೆ.
ಟಾಟಾ ವಾಹನ ಚಾಲಕ ಗಂಭೀರ ಗಾಯಗೊಂಡಿದ್ದು, ಬೈಕ್ ಸವಾರ ಕೂಡಾ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
RELATED TOPICS:
English summary :Mangalore