ನಿಶ್ಚಿತಾರ್ಥ ಆಗಿದ್ದ ಯುವತಿ ಪ್ರಿಯಕರನೊಂದಿಗೆ ಹೆಣವಾಗಿ ಪತ್ತೆ | ಜನತಾ ನ್ಯೂಸ್
ಹಾವೇರಿ : ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಾಗನೂರು ಗ್ರಾಮದ ಬಳಿಯ ಹೊಲದಲ್ಲಿ ನಡೆದಿದೆ.
ವಿದ್ಯಾಶ್ರೀ ಗಾಳಿ(22), ಇರ್ಷಾದ್ ಕುಡಚಿ(23) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಏಪ್ರಿಲ್ 24 ರಂದು ಬೆಳಗಿನ ಜಾವ ಮನೆಯಿಂದ ವಿದ್ಯಾಶ್ರೀ ನಾಪತ್ತೆಯಾಗಿದ್ದಳು. ಈ ಸಂಬಂಧ ತಾಲೂಕಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ವಿದ್ಯಾಶ್ರೀ ಮತ್ತು ಇರ್ಷಾದ್ ಇಬ್ಬರೂ ಒಬ್ಬರನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬಸ್ಥರ ಒಪ್ಪಿಗೆ ಇರಲಿಲ್ಲ. ಇತ್ತೀಚೆಗಷ್ಟೇ ವಿದ್ಯಾಶ್ರೀಗೆ ಬೇರೊಬ್ಬ ಯುವಕನ ಜೊತೆ ನಿಶ್ಚಿತಾರ್ಥ ಆಗಿತ್ತು.
ಇರ್ಷಾದ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲೇ ಇರ್ಷಾದ್ ಮತ್ತು ವಿದ್ಯಾಶ್ರೀ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಸಿಪಿಐ ನಾಗಮ್ಮ, ಮಹಿಳಾ ಠಾಣೆ ಸಿಪಿಐ ಚಿದಾನಂದ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.