ವೀಕೆಂಡ್ ಕರ್ಫ್ಯೂ ಮುಂದುವರಿಯುತ್ತಾ? ಇಲ್ಲಾ? ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ | ಜನತಾ ನ್ಯೂಸ್
ಬೆಂಗಳೂರು : ವೀಕೆಂಡ್ ಕರ್ಫ್ಯೂವನ್ನು ಬೇರೆ ದಿನಗಳಿಗೆ ವಿಸ್ತರಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ. ಸದ್ಯ ಇರುವ ವ್ಯವಸ್ಥೆಯೇ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸದ್ಯ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ. ಕೇಂದ್ರ ಸರ್ಕಾರ ರಾಜ್ಯದ ಆಕ್ಸಿಜನ್ ಪಾಲನ್ನ ಹೆಚ್ಚಾಸಿದೆ, 300 ಮೆಟ್ರಿಕ್ ಟನ್ಗಳಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ನನ್ನು ರಾಜ್ಯಕ್ಕೆ ಹೆಚ್ಚುವರಿಯಾಗಿ ನೀಡಲು ಕೇಂದ್ರ ಒಪ್ಪಿದೆ. ನಿನ್ನೆ ಸಂಜೆ ಮುಖ್ಯಮಂತ್ರಿಗಳ ಜೊತೆ ಈ ಸಂಬಂಧ ಸಭೆ ನಡೆಸಲಾಯಿತು, ಈ ವೇಳೆಯೇ ಕೇಂದ್ರ ಸರ್ಕಾರದಿಂದ ಭರವಸೆ ಸಿಕ್ಕಿರುವ ಬಗ್ಗೆ ಸಿಎಂ ಮಾಹಿತಿ ನೀಡಿದರು ಎಂದು ಹೇಳಿದರು..
ಇಂದು ಸಂಜೆ ವೇಳೆಗೆ ಕೇಂದ್ರ ಸರ್ಕಾರ ನಮಗೆ ಆಮ್ಲಜನಕ ಪೂರೈಕೆ ಪ್ರಮಾಣವನ್ನು 300 ಮೆಟ್ರಿಕ್ ಟನ್ನಿಂದ 800 ಮೆಟ್ರಿಕ್ ಟನ್ಗೆ ಹೆಚ್ಚಿಸಿ ಆದೇಶ ಹೊರಡಿಸಿರುವಂತೆ ಹೆಚ್ಚುವರಿ ಆಮ್ಲಜನಕ ಬರಲಿದೆ. ಹಾಗಾಗಿ ಬರುವ ದಿನಗಳಲ್ಲಿ ಆಮ್ಲಜನಕದ ಕೊರತೆ ನಮಗೆ ಕಡಿಮೆಯಾಗಲಿದೆ. ಯಾವುದೇ ರೀತಿಯ ಕೊರತೆಯಾಗದಂತೆ ನಿಭಾಯಿಸುವ ಕೆಲಸವನ್ನು ನಮ್ಮ ಅಧಿಕಾರಿಗಳು ಮಾಡಲಿದ್ದಾರೆ ಎಂದರು.
ಮೇ 1 ರಿಂದ 18 ವರ್ಷದ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ವಿತರಣೆಯಾಗಲಿದೆ. 45 ನೇ ವರ್ಷ ವಯಸ್ಕರಿಗೆ ಎರಡನೇ ಹಂತದ ಲಸಿಕೆ ನೀಡುತ್ತೇವೆ. ರೆಮ್ಡಿಸಿವರ್ ಇಂಜೆಕ್ಷನ್ ಕೂಡ ಎಲ್ಲಾ ಜಿಲ್ಲೆಗಳಿಗೆ ಪೂರೈಕೆ ಮಾಡ್ತೇವೆ ಎಂದರು.