Tue,Apr30,2024
ಕನ್ನಡ / English

ರಾಜ್ಯ ಸರ್ಕಾರಕ್ಕೆ 11 ಸಲಹೆ ನೀಡಿ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ | ಜನತಾ ನ್ಯೂಸ್

28 Apr 2021
1264

ಬೆಂಗಳೂರು : ಕೊರೊನಾ ಸೋಂಕು ನಿಯಂತ್ರಣ, ಸೋಂಕಿತರಿಗೆ ಚಿಕಿತ್ಸೆ ನೀಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿ ಹಾಗೂ ಸಾರ್ವಜನಿಕರ ರಕ್ಷಣೆಗೆ ಸರ್ಕಾರ ಯಾವ ರೀತಿ ಮುಂದಾಗಬೇಕು ಎಂಬುದರ ಬಗ್ಗೆ ಸಲಹೆ ನೀಡಿ ಸಿದ್ದರಾಮಯ್ಯ, ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡು 15 ತಿಂಗಳಾದವು. ರಾಜ್ಯದಲ್ಲಿ 14 ತಿಂಗಳಾದವು. ಕಳೆದ ಒಂದು ತಿಂಗಳಿಂದೀಚೆಗೆ ಎರಡನೇ ಅಲೆ ಪ್ರಾರಂಭವಾಗಿದೆ. ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ರಾಜ್ಯ ಮತ್ತು ರಾಷ್ಟ್ರದಲ್ಲಿ ಕಳೆದ ವರ್ಷದ ಆರಂಭದಲ್ಲಿ ಕೋವಿಡ್ ಕಾಣಿಸಿಕೊಂಡಿತು. ಇದರ ಮೊದಲ ಹಂತದಲ್ಲಿ ಕೋವಿಡ್ ಸೋಂಕು ವ್ಯಾಪಿಸಲು ನಿಸರ್ಗದಲ್ಲಿನ ಏರುಪೇರುಗಳೂ ಸಹ ಕಾರಣವಾಗಿದ್ದವು ಎಂದು ಹೇಳಬಹುದು. ಆದರೆ, ಎರಡನೇ ಅಲೆಯ ಸಂದರ್ಭದಲ್ಲಿ ಉಂಟಾಗುತ್ತಿರುವ ಸಾವು-ನೋವುಗಳಿಗೆ ನೇರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅದಕ್ಷತೆ ಮತ್ತು ನಿರ್ಲಕ್ಷ್ಯಗಳೇ ಕಾರಣ.

2020ರ ನವೆಂಬರ್ 21ರಂದು ಸಂಸತ್ತಿನ ಸ್ಥಾಯಿ ಸಮಿತಿಯು ಕೇಂದ್ರ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ ಬರುವ ಬಗ್ಗೆ, ಅದಕ್ಕಾಗಿ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಕುರಿತು ವರದಿ ನೀಡಿತ್ತು. ಅದೇ ತಿಂಗಳ ಅಂತ್ಯದಲ್ಲಿ ನಮ್ಮಲ್ಲಿ ರಾಜ್ಯಸರ್ಕಾರ ರಚಿಸಿರುವ ತಾಂತ್ರಿಕ ಸಲಹೆಗಾರರ ತಂಡ ಎರಡನೇ ಅಲೆಯ ಕುರಿತು ಸಲಹೆಗಳನ್ನು ನೀಡಿತ್ತು. ಈ ವರದಿಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡೂ ಸಂಪೂರ್ಣ ನಿರ್ಲಕ್ಷಿಸಿದವು. ಈ ವರದಿಗಳನ್ನು, ಎಚ್ಚರಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಹಾಸಿಗೆ, ಆ್ಯಂಬುಲೆನ್ಸ್​, ಔಷಧ, ಐಸಿಯು, ಆಕ್ಸಿಜನ್ ವ್ಯವಸ್ಥೆಗಳನ್ನು ಸಿದ್ದಪಡಿಸಿಕೊಳ್ಳಬೇಕಿತ್ತು. ಆದರೆ, ನೀವೇನು ಮಾಡಿದ್ದೀರಿ ಎಂದು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಿ. ಆರಂಭದಲ್ಲಿದ್ದ ಪರಿಸ್ಥಿತಿಯಲ್ಲಿ ಈಗ ಏನಾದರೂ ಬದಲಾವಣೆ ಆಗಿದೆಯೇ? ಇದ್ದರೆ ಸಾರ್ವಜನಿಕರಿಗೆ ತಿಳಿಸಿ ಎಂದಿದ್ದಾರೆ.

ಹೊಸದಾಗಿ ಎಷ್ಟು ಬೆಡ್​​, ಐಸಿಯು, ಆಕ್ಸಿಜನ್ ವ್ಯವಸ್ಥೆ ಹೆಚ್ಚಿಸಿದ್ದೀರಿ? ರೆಮ್ ಡಿಸಿವಿಯರ್ ಉತ್ಪಾದನೆಯನ್ನು ಎಷ್ಟು ಹೆಚ್ಚಿಸಲಾಗಿದೆ? ಆಕ್ಸಿಜನ್ ಉತ್ಪಾದನೆಯನ್ನು ಎಷ್ಟು ಹೆಚ್ಚಿಸಲಾಗಿದೆ? ತಿಳಿಸಿ. ವೈದ್ಯಕೀಯ ಕ್ಷೇತ್ರದಲ್ಲಿ ತಜ್ಞರಾಗಿರುವ ಡಾ.ದೇವಿಪ್ರಸಾದ್ ಶೆಟ್ಟಿ ಅವರ ಪ್ರಕಾರ, ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚು ಸೋಂಕಿತರಾಗಿರುವವರು ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು, ಚಿಕ್ಕ ವಯಸ್ಸಿನವರು ಅವರ ಕುಟುಂಬಗಳ ದುಡಿಮೆಗೆ ಜೀವನಾಧಾರವಾಗಿರುವ ಯುವಕರೇ ಆಗಿದ್ದಾರೆ. ದುರಂತವೆಂದರೆ ಹೆಚ್ಚು ಮರಣ ಹೊಂದುತ್ತಿರುವವರೂ ಸಹ ಯುವಜನತೆ. ಕುಟುಂಬಗಳಲ್ಲಿ ದುಡಿಯುವ ವಯಸ್ಸಿನವರು ಮರಣ ಹೊಂದಿದರೆ ಇಡೀ ಕುಟುಂಬದ ಬದುಕು ಸಂಪೂರ್ಣ ಅಸ್ತವ್ಯಸ್ತವಾಗುತ್ತದೆ ಮತ್ತು ದುರಂತಕ್ಕೆ ಸಿಲುಕಿಕೊಳ್ಳುತ್ತದೆ.

ಡಾ. ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ವರದಿಯಾಗುತ್ತಿರುವುದಕ್ಕಿಂತ ಕನಿಷ್ಟ 5ಪಟ್ಟು ಹೆಚ್ಚು ಜನ ಸೋಂಕಿತರಾಗುತ್ತಿದ್ದಾರೆ. ರಾಜ್ಯದಲ್ಲಿ 35 ರಿಂದ 40 ಸಾವಿರ ಜನ ಪ್ರತಿದಿನ ಸೋಂಕಿಗೆ ತುತ್ತಾಗುತ್ತಿದ್ದಾರೆ ಎಂದರೆ, ವಾಸ್ತವದಲ್ಲಿ ಕನಿಷ್ಟ 2 ಲಕ್ಷ ಜನರು ಸೋಂಕಿಗೆ ತುತ್ತಾಗುತ್ತಿದ್ದಾರೆಂದೇ ಅರ್ಥ. ಇದರಲ್ಲಿ ಕನಿಷ್ಠ ಶೇ. 5ರಷ್ಟು ಜನಕ್ಕೆ ವೆಂಟಿಲೇಟರ್ ಅಗತ್ಯವಿದೆ ಎಂದರೂ 10,000 ವೆಂಟಿಲೇಟರ್​ಗಳ ಅಗತ್ಯವಿರುತ್ತದೆ. ಒಬ್ಬ ರೋಗಿ 10 ದಿನ ಐಸಿಯುನಲ್ಲಿ ಇರುತ್ತಾನೆಂದುಕೊಂಡರೆ, 10 ದಿನಕ್ಕೆ ಒಂದು ವೆಂಟಿಲೇಟರ್​ಗಳು ಬೇಕಾಗುತ್ತವೆ. ಆದರೆ, ರಾಜ್ಯದಲ್ಲಿ 10 ಸಾವಿರ ಐಸಿಯು ಬೆಡ್​ಗಳಿಲ್ಲ. ಅತಿಹೆಚ್ಚು ಸೋಂಕಿತರಿರುವ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಐಸಿಯು ಬೆಡ್​ಗಳು ಕೇವಲ 952 ಮಾತ್ರ. ಅದರಲ್ಲಿ ವೆಂಟಿಲೇಟರ್ ಸೌಲಭ್ಯವಿರುವ ಬೆಡ್​ಗಳ ಸಂಖ್ಯೆ ಕೇವಲ 434 ಮಾತ್ರ. ಇಂತಹ ಪರಿಸ್ಥಿತಿಯಲ್ಲಿ ರೋಗಿಗಳು ಮರಣ ಹೊಂದಿದರೆ, ಅದಕ್ಕೆ ಯಾರನ್ನು ಹೊಣೆ ಮಾಡಬೇಕು? ಕಳೆದ ಒಂದು ತಿಂಗಳಿನಿಂದಾದರೂ ಎಷ್ಟು ಐಸಿಯು ಬೆಡ್, ಆಕ್ಸಿಜನ್ ವ್ಯವಸ್ಥೆಯನ್ನು ಹೆಚ್ಚಿಸಿದ್ದೀರಿ? ಸಾರ್ವಜನಿಕರಿಗೆ ತಿಳಿಸಿ ಎಂದು ಹೇಳಿದ್ದಾರೆ.

ರಾಜ್ಯದ ಜನರ ಸಂಕಟಗಳನ್ನು ನೋಡಲಾಗುತ್ತಿಲ್ಲ. ಆಕ್ಸಿಜನ್ ವ್ಯವಸ್ಥೆಯೂ ಇದೇ ರೀತಿ ಇದೆ. 1,400 ಟನ್ ಆಕ್ಸಿಜನ್ ಅಗತ್ಯವಿರುವ ಕಡೆ ಕೇವಲ 300-400 ಟನ್ ಆಕ್ಸಿಜನ್ ಹಂಚಿಕೆ ಮಾಡಲಾಗಿದೆ. ವೈರಸ್​ ನಿಯಂತ್ರಣಕ್ಕೆ ಅತ್ಯಗತ್ಯವಾಗಿ ಬೇಕಾಗಿರುವ ರೆಮ್ ಡಿಸಿವಿಯರ್ ಔಷಧಿ ಬೇಡಿಕೆಗೆ ಹೋಲಿಸಿದರೆ, ಶೇ.20ರಷ್ಟೂ ಸರಬರಾಜು ಆಗುತ್ತಿಲ್ಲ. ಘನತೆಯಿಂದ ಶವಸಂಸ್ಕಾರವನ್ನೂ ಮಾಡಲಾಗದ ಪರಿಸ್ಥಿತಿಯನ್ನು ರಾಜ್ಯದಲ್ಲಿ ನಿರ್ಮಿಸಿದ್ದೀರಿ. ಇಂತಹ ಸಂದರ್ಭದಲ್ಲಿ ನಾಗರಿಕ ಸರ್ಕಾರವೊಂದು ನಡೆದುಕೊಳ್ಳಬೇಕಾದ ರೀತಿ ಇದೇನಾ ಎಂದು ಜನ ಕೇಳುತ್ತಿದ್ದಾರೆ. ಆದ್ದರಿಂದ ಸರ್ಕಾರ ತನ್ನೆಲ್ಲಾ ಶಕ್ತಿಯನ್ನು ಬಳಸಿ ಸಾರ್ವಜನಿಕರ ರಕ್ಷಣೆಗೆ ನಿಲ್ಲಬೇಕೆಂದು ಒತ್ತಾಯಿಸುತ್ತೇನೆ. ಅದಕ್ಕಾಗಿ ಈ ಸಲಹೆಗಳನ್ನು ನೀಡ ಬಯಸುತ್ತೇನೆ ಎಂದಿರುವ ಅವರು, ಒಟ್ಟು 11 ಸಲಹೆಗಳನ್ನು ನೀಡಿದ್ದಾರೆ.

janata

RELATED TOPICS:
English summary :Siddaramaiah

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...