ಪೆರ್ಡೂರು ಮೇಳದ ಹೆಸರಾಂತ ಯಕ್ಷಗಾನ ಕಲಾವಿದ ನಾಪತ್ತೆ | ಜನತಾ ನ್ಯೂಸ್
ಉಡುಪಿ : ಖ್ಯಾತ ಯಕ್ಷಗಾನ ಕಲಾವಿದ, ಪೆರ್ಡೂರು ಮೇಳದ ಕಲಾವಿದನಾಗಿ ಸೇವೆ ಸಲ್ಲಿಸುತ್ತಿದ್ದ ಕಡಬಾಳ ಉದಯ ಹೆಗಡೆ ನಾಪತ್ತೆಯಾಗಿದ್ದಾರೆ.
ಮತ್ಯಾಡಿ ಗುಡ್ಡೆಯಂಗಡಿ ನಿವಾಸಿ ಕಡಬಾಳ ಉದಯ ಹೆಗಡೆ (37) ನಾಪತ್ತೆಯಾದವರು. ಇವರು ಕರಾವಳಿಯ ಹೆಸರಾಂತ ಪೆರ್ಡೂರು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಏಪ್ರಿಲ್ 21ರಂದು ಮನೆಯಿಂದ ಕಾರಿನಲ್ಲಿ ತೆರಳಿದ್ದ ಅವರು ವಾಪಾಸು ಮನೆಗೆ ಬಂದಿಲ್ಲ.
ಸಂಬಂಧಿಕರನ್ನು ವಿಚಾರಿಸಿದಾಗಲು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಕಡಬಾಳರ ಪತ್ನಿ, ಕಲಾವಿದೆ ಅಶ್ವಿನಿ ಹೆಗಡೆ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಉದಯ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
English summary :Udupi