Sun,May19,2024
ಕನ್ನಡ / English

ಲಾಕ್‌ಡೌನ್‌ಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ, ಸಿಎಂಗೆ ಸಿದ್ದರಾಮಯ್ಯ ಪತ್ರ | ಜನತಾ ನ್ಯೂಸ್

30 Apr 2021
1268

ಬೆಂಗಳೂರು : ಲಾಕ್‌ಡೌನ್‌ಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ. ಪ್ರತಿ ಕುಟುಂಬಕ್ಕೆ 10 ಸಾವಿರ ಪ್ಯಾಕೇಜ್ ನೀಡವಂತೆ ಒತ್ತಾಯಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಬಿಎಸ್‌ವೈಗೆ ಪತ್ರ ಬರೆದಿದ್ದಾರೆ.

ಲಾಕ್‌ಡೌನ್‌ನಿಂದ ರೈತ- ಕಾರ್ಮಿಕರಿಗೆ ಜೀವನ ನಡೆಸಲು ಕಷ್ಟವಾಗಿದೆ. ಖಾಸಗಿ ಆಸ್ಪತ್ರೆ, ಶಾಲೆಯ ಶುಲ್ಕವನ್ನು ಶೇ. 50 ರಷ್ಟು ಕಡಿತ ಮಾಡಿ ಸೇರಿದಂತೆ ಕೆಲವು ಮನವಿಗಳನ್ನು ಮಾಡಿದ್ದಾರೆ.

ಉತ್ತರ ಕರ್ನಾಟಕವೂ ಸೇರಿದಂತೆ ಅನೇಕ ಜಿಲ್ಲೆಗಳ ಜನ ಬೇಸಿಗೆಯಲ್ಲಿ ನಗರಗಳಿಗೆ ವಲಸೆ ಹೋಗಿ ಕೂಲಿ ನಾಲಿ ಮಾಡಿ ಒಂದಿಷ್ಟು ಹಣ ಸಂಪಾದಿಸಿ ಅದನ್ನು ಮುಂಗಾರಿನ ಕೃಷಿ ಕೆಲಸಗಳಿಗೆ ವಿನಿಯೋಗಿಸುತ್ತಾರೆ. ಈಗ ಕರ್ಫ್ಯೂ ಹೇರಿಕೆ ಮಾಡಿರುವುದರಿಂದ ಅವರ ದುಡಿಮೆ ಸಂಪೂರ್ಣ ಹಾಳಾಗಿದೆ. ದುಡಿಯಲೆಂದು ಬಂದವರು ಮರಳಿ ವಾಪಸ್​​ ಹೋಗಿದ್ದಾರೆ. ಆದ್ದರಿಂದ ಸರ್ಕಾರ ಈ ಎಲ್ಲ ರೈತಾಪಿ ಕುಟುಂಬಗಳಿಗೆ ಬೀಜ, ಗೊಬ್ಬರ, ಔಷಧ ಮುಂತಾದವುಗಳನ್ನು ಉಚಿತವಾಗಿ ವಿತರಿಸಬೇಕು.

ರಾಜ್ಯದಲ್ಲಿ ಸುಮಾರು 1.30 ಲಕ್ಷ ಬಿಪಿಎಲ್ ವರ್ಗಕ್ಕೆ ಸೇರಿದ ಕುಟುಂಬಗಳಿವೆ. ಈ ಕುಟುಂಬಗಳಿಗೆ ಸೇರಿದ ಬಹುಪಾಲು ಜನರು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿದ್ದಾರೆ. ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಸಂಖ್ಯೆ ಸುಮಾರು 1.5 ಕೋಟಿಗಳಷ್ಟಿದೆ. ಎಲ್ಲ ದುಡಿಯುವ ವರ್ಗಗಳು, ಸಮುದಾಯಗಳು ಹಾಗೂ ಬಿಪಿಎಲ್ ವರ್ಗದಡಿ ಬರುವ ಕುಟುಂಬಗಳು ದುಡಿಮೆ ಇಲ್ಲದೆ ಆರ್ಥಿಕ ಚೈತನ್ಯ ಕಳೆದುಕೊಂಡು ತೀವ್ರ ಆರ್ಥಿಕ ಸಂಕಷ್ಟದಲ್ಲಿವೆ. ಅವರೆಲ್ಲರಿಗೂ ಪ್ರತಿ ತಿಂಗಳು ಕನಿಷ್ಠ 10,000 ರೂಪಾಯಿಗಳ ಆರ್ಥಿಕ ಪ್ಯಾಕೇಜನ್ನು ಈ ಕೂಡಲೇ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ 87 ಲಕ್ಷ ರೈತಾಪಿ ಕುಟುಂಬಗಳಿವೆ. ರೈತರಲ್ಲಿ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಹಿಡುವಳಿಗಳನ್ನು ಹೊಂದಿರುವ ಕಟುಂಬಗಳು ಶೇ. 90ರಷ್ಟಿವೆ. ಬಹುಪಾಲು ಈ ಕುಟುಂಬಗಳೂ ಸಹ ಬಿಪಿಎಲ್ ವರ್ಗದಡಿಯೇ ಇವೆ. ಹಾಗಾಗಿ ಈ ರೈತಾಪಿ ಕುಟುಂಬಗಳಿಗೂ ಸಹ ತಿಂಗಳಿಗೆ 10,000 ರೂ.ಗಳ ಪ್ಯಾಕೇಜ್​ ಘೋಷಿಸಬೇಕು.

ರಾಜ್ಯದ ಕೃಷಿಕರು ಸಂಕಷ್ಟದಲ್ಲಿರುವುದರಿಂದ ಅವರಿಗೆ ಸಹಕಾರಿ ಬ್ಯಾಂಕುಗಳು, ವಾಣಿಜ್ಯ ಬ್ಯಾಂಕುಗಳ ಮೂಲಕ ಬಡ್ಡಿ ರಹಿತ ಕೃಷಿ ಸಾಲಗಳನ್ನು ಕನಿಷ್ಠ 5 ಲಕ್ಷ ರೂ.ಗಳವರೆಗೆ ನೀಡಬೇಕು. ಇದನ್ನು ಮಾಡುವುದು ಕಷ್ಟದ ವಿಚಾರವೇನೂ ಅಲ್ಲ. ದೇಶದ ದೊಡ್ಡ ದೊಡ್ಡ ಕಾರ್ಪೋರೇಟ್ ಕುಳಗಳಿಗೆ ಸಂಬಂಧಿಸಿದ ಸುಮಾರು 10.5 ಲಕ್ಷ ಕೋಟಿಗೂ ಹೆಚ್ಚು ಸಾಲವನ್ನು ವಸೂಲು ಮಾಡದೆ ಕೈ ಬಿಡಲಾಗಿದೆ. ಅಂಥದ್ದರಲ್ಲಿ ರೈತಾಪಿವರ್ಗಗಳಿಗೆ ನೀಡುವ ಕೆಲವು ಸಾವಿರ ಕೋಟಿಗಳಷ್ಟು ಬಡ್ಡಿ ರಹಿತ ಸಾಲದಿಂದ ದೇಶದ ಆರ್ಥಿಕತೆ ಮುಳುಗಿ ಹೋಗುವುದಿಲ್ಲ. ಬದಲಿಗೆ ಆರ್ಥಿಕತೆ ಸುಧಾರಣೆಯಾಗುತ್ತದೆ. ಆದ್ದರಿಂದ ಬಡ್ಡಿ ರಹಿತ ಸಾಲವನ್ನು ನೀಡಿ ರೈತರ ನೆರವಿಗೆ ನಿಲ್ಲಬೇಕು ಎಂದು ಒತ್ತಾಯಿಸಿದ್ದಾರೆ.

ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರಿಗೆ ರಿಯಾಯಿತಿ ದರಗಳಲ್ಲಿ ಸಾಧ್ಯವಾದರೆ ಉಚಿತವಾಗಿ ರಸಗೊಬ್ಬರಗಳನ್ನು ವಿತರಿಸಬೇಕು. ನಗರಗಳಿಂದ ಗ್ರಾಮಗಳಿಗೆ ವಲಸೆ ಹೊರಟ ಕಾರ್ಮಿಕರಿಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ [ನರೇಗಾ] ಕನಿಷ್ಠ 150 ಮಾನವ ದಿನಗಳಷ್ಟು ಮತ್ತು ಅದಕ್ಕೂ ಹೆಚ್ಚು ಬೇಡಿಕೆ ಇರುವ ಕಡೆ ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕು.

ಹಿಂದೆ ನಿಮ್ಮದೇ ಸರ್ಕಾರವಿದ್ದಾಗ ಮನಮೋಹನ್​ ಸಿಂಗ್ ಅವರು ಪ್ರಧಾನಮಂತ್ರಿಗಳಾಗಿದ್ದಾಗ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೆ 150 ಮಾನವ ದಿನಗಳಿಗೆ ಹೆಚ್ಚಿಸಿ ಎಂದಾಗ ಅವರು ಅದಕ್ಕೆ ಸ್ಪಂದಿಸಿ ಬೇಡಿಕೆ ಈಡೇರಿಸಿದ್ದರು. ಈಗಲೂ ರಾಜ್ಯ ಸರ್ಕಾರ, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ರಾಜ್ಯದ ಬಿಜೆಪಿ ಸಂಸದರುಗಳು ಈ ಕುರಿತು ಪ್ರಧಾನಿಗಳನ್ನು ಒತ್ತಾಯ ಮಾಡಿ ರಾಜ್ಯದ ಜನರ ನೆರವಿಗೆ ನಿಲ್ಲಬೇಕು ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ಕೃಷಿಯ ವಿಸ್ತರಿತ ಪ್ರದೇಶಗಳಾದ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳ ಜನರಿಗೂ ವಿಸ್ತಿರಿಸಬೇಕು. ಅವರೂ ಸಹ ಉದ್ಯೋಗವಿಲ್ಲದೆ ಕಂಗಾಲಾಗಿದ್ದಾರೆ. ನರೇಗಾ ಯೋಜನೆಯ ಕೂಲಿ ದರಗಳನ್ನು ಹಣದುಬ್ಬರವನ್ನು ಆಧರಿಸಿ ಕೂಡಲೇ ಹೆಚ್ಚು ಮಾಡಬೇಕು.

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪಕ್ಕದ ಕೇರಳ ರಾಜ್ಯದಂತೆ ಪ್ರತಿ ಕುಟುಂಬಕ್ಕೆ ಆಹಾರ ಧಾನ್ಯಗಳ, ಜೀವನಾವಶ್ಯಕ ಅಗತ್ಯ ವಸ್ತುಗಳನ್ನೊಳಗೊಂಡ ಕಿಟ್‍ಗಳನ್ನು ಒದಗಿಸಬೇಕು. ಕಿಟ್​​ಗಳಲ್ಲಿ ಪ್ರತಿಯೊಬ್ಬರಿಗೆ ಕನಿಷ್ಠ 10 ಕೆಜಿ ಅಕ್ಕಿ, ಗೋಧಿ, ಅಡುಗೆ ಎಣ್ಣೆ, ಬೇಳೆಕಾಳುಗಳು ಮುಂತಾದ ದಿನಸಿ ಪದಾರ್ಥಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಯಥೇಚ್ಛವಾಗಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಹಾಗಾಗಿ ಸಣ್ಣ, ಅತಿ ಸಣ್ಣ, ಸೂಕ್ಷ್ಮ, ಗೃಹ, ಮಧ್ಯಮ ಪ್ರಮಾಣದ ಈ ಕಂಪನಿಗಳಿಗೆ ಉಚಿತವಾಗಿ ವಿದ್ಯುತ್ ಪೂರೈಸಬೇಕು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಇಲ್ಲದಿದ್ದರೂ ಅದಾನಿ ಮುಂತಾದವರಿಗೆ ವರ್ಷಕ್ಕೆ ಅನಾಮತ್ತಾಗಿ ಸಾವಿರಾರು ಕೋಟಿಗಳನ್ನು ನೀಡಲಾಗುತ್ತಿದೆ. ಅದನ್ನು ನಿಲ್ಲಿಸಿ ಸರ್ಕಾರ ಉದ್ಯೋಗ ಸೃಷ್ಟಿಸುವ ಈ ಕೈಗಾರಿಕೆಗಳ ನೆರವಿಗೆ ನಿಲ್ಲಬೇಕು.

ಈ ಕಂಪನಿಗಳು ಉತ್ಪಾದಿಸಿ ರಫ್ತು ಮಾಡುವ ಉತ್ಪನ್ನಗಳಿಗೆ ರಫ್ತು ಶುಲ್ಕಕ್ಕೆ ವಿನಾಯಿತಿ ನೀಡಬೇಕು. ಆಮದು ಶುಲ್ಕವನ್ನೂ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ಆಟೋ, ಕ್ಯಾಬ್, ಟ್ಯಾಕ್ಸಿ ಮುಂತಾದ ವಾಹನಗಳಿಗೆ ಕಳೆದ ಒಂದು ವರ್ಷದಿಂದ ಬಾಡಿಗೆ ಇಲ್ಲ. ಪ್ರಮುಖ ಪ್ರಯಾಣಿಕರಾಗಿದ್ದ ಐಟಿ ಮುಂತಾದ ಕಂಪನಿಗಳ ಉದ್ಯೋಗಿಗಳು ಮನೆಗಳಿಂದಲೇ ಕೆಲಸ ಮಾಡುತ್ತಿದ್ದಾರೆ.

ಹಾಗಾಗಿ ಈ ವಾಹನಗಳ ದುಡಿಮೆ ನೆಚ್ಚಿಕೊಂಡಿದ್ದ ಚಾಲಕರು, ಮಾಲೀಕರು ವಿಪರೀತ ನಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ವಲಯದ ಕೆಲವರು ನಷ್ಟದಿಂದ ಹೊರ ಬರಲಾಗದೆ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಸುದ್ದಿಗಳು ಬರುತ್ತಿವೆ. ಸರ್ಕಾರ ಕಣ್ಣು ಮುಚ್ಚಿಕೊಂಡು ಮೌನವಾಗಿರುವುದು ಭೀಕರ ಅಮಾನವೀಯತೆಗೆ ಸಾಕ್ಷಿ. ನಿಮ್ಮ ಪ್ಯಾಕೇಜು ಮತ್ತು ಕೇಂದ್ರದ ಆತ್ಮ ನಿರ್ಭರ ಪ್ಯಾಕೇಜು ಸಮರ್ಪಕವಾಗಿ ಈ ವರ್ಗಗಳಿಗೆ ತಲುಪಿದ್ದರೆ ಅವರುಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ.

ಕಳೆದ ವರ್ಷ ರಾಜ್ಯ ಸರ್ಕಾರ ಘೋಷಿಸಿದ್ದ ಪ್ಯಾಕೇಜಿನಲ್ಲಿ ಕಾಲು ಭಾಗದಷ್ಟು ಚಾಲಕರಿಗೂ ಅನುಕೂಲವಾಗಲಿಲ್ಲ. ಆದ್ದರಿಂದ ಸರಳ ನಿಯಮಗಳನ್ನು ಮಾಡಿ ಕಳೆದ ವರ್ಷ ಬಾಕಿಯಾಗಿರುವ ಎಲ್ಲರಿಗೂ ಘೋಷಿತ ಪರಿಹಾರವನ್ನು ನೀಡಬೇಕು. ಈ ವರ್ಷ ಮತ್ತೆ ಲಾಕ್​​ಡೌನ್ ಹೇರಿರುವುದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಪ್ರತಿ ತಿಂಗಳು ಕನಿಷ್ಠ 10,000 ರೂ. ನೀಡುವ ಪ್ಯಾಕೇಜನ್ನು ಘೋಷಿಸಬೇಕು ಎಂದಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಶುಲ್ಕಕ್ಕೆ ಸಂಬಂಧಿಸಿದಂತೆ ಸರ್ಕಾರ ದೊಡ್ಡ ಮಟ್ಟದ ರಿಯಾಯಿತಿ ಕೊಡಿಸುವುದಾಗಿ ಘೋಷಿಸಿತು. ಆದರೆ ಅದು ಜಾರಿಗೆ ಬರಲಿಲ್ಲ. ಈ ವರ್ಷ ಮತ್ತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಿಸಿವೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಶುಲ್ಕ ಮನ್ನಾ ಮಾಡಲು ಅಥವಾ ಶೇ. 50ರಷ್ಟಾದರೂ ಕಡಿತಗೊಳಿಸಲು ಕಠಿಣ ನಿಯಮಾವಳಿಗಳನ್ನು ರೂಪಿಸಬೇಕು. ಈ ಎಲ್ಲ ಒತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಆರ್ಥಿಕ ಪ್ಯಾಕೇಜುಗಳನ್ನು ಘೋಷಿಸಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...