ನನ್ನ 3 ತಿಂಗಳ ಸಂಬಳ ಆಶಾ ಕಾರ್ಯಕರ್ತೆಯರಿಗೆ: ಶಾಸಕ ಗಣೇಶ್ ಹುಕ್ಕೇರಿ | ಜನತಾ ನ್ಯೂಸ್
ಬೆಳಗಾವಿ : ಚಿಕ್ಕೋಡಿ-ಸದಲಗಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ, ಅವರು ಆಶಾ ಕಾರ್ಯಕರ್ತೆಯರಿಗೆ ತಮ್ಮ ಮೂರು ತಿಂಗಳ ಸಂಬಳ ನೀಡುವುದಾಗಿ ಘೋಷಿಸಿದ್ದಾರೆ.
ಮುಂದಿನ ಮೂರು ತಿಂಗಳ ಸಂಬಳವನ್ನು ತಮ್ಮ ಕ್ಷೇತ್ರದ ಫ್ರಂಟ್ ಲೈನ್ ವಾರಿಯರ್ ಗಳಾದ ಆಶಾ ಕಾರ್ಯಕರ್ತೆಯರಿಗೆ ನೀಡಲು ಒಪ್ಪಿಗೆ ನೀಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳ ಮನವಿಯಂತೆ ಒಂದು ತಿಂಗಳ ಸಂಬಳವನ್ನ ಕೋವಿಡ್ ನಿಧಿಗೆ ನೀಡಿದ್ದಾರೆ. ಜೊತೆಗೆ ಅದರ ಮುಂದಿನ ಮೂರು ತಿಂಗಳ ಸಂಬಳವನ್ನ ಕೋವಿಡ್ ವಾರಿಯರ್ ಗಳಿಗೆ ನೀಡಲು ಶಾಸಕರು ಮುಂದಾಗಿದ್ದಾರೆ.
ಈ ಬಗ್ಗೆ ಖುದ್ದು ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಬರೆದು ಕೊಂಡಿರುವ ಶಾಸಕ ಗಣೇಶ್ ಹುಕ್ಕೇರಿ, ಈಗಾಗಲೇ ತಮ್ಮ ಸ್ವಂತ ಹಣದಲ್ಲಿ ಉಚಿತ ಅಂಬುಲೆನ್ಸ್ ಹಾಗೂ 120 ಬೆಡ್ ಗಳ ಕೋವಿಡ್ ಆಸ್ಪತ್ರೆಯನ್ನು ನಿರ್ಮಾಣ ಮಾಡಿದ್ದಾರೆ. ರೋಗಿಗಳಿಗೆ ಉಚಿತ ಊಟ, ತಿಂಡಿ, ಹಣ್ಣು ಎಲ್ಲವನ್ನೂ ತಮ್ಮ ಅಣ್ಣಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ನಿಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂಧಿ ಕೊರತೆ ಇರುವ ಹಿನ್ನೆಲೆ, ಅಣ್ಣಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಸಂಬಳ ನೀಡಿ ಭರ್ತಿ ಮಾಡಿಕೊಳ್ಳುತ್ತಿದ್ದಾರೆ.
ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಸಮುದಾಯಕ್ಕೆ ತಿಳಿವಳಿಕೆ ನೀಡುವುದರಿಂದ ಹಿಡಿದು ಕ್ಷೇತ್ರದ ನಾಗರಿಕರಿಗೆಲ್ಲರಿಗೂ ಕೊರೋನಾ ಲಸಿಕೆಯನನ್ನು ಹಾಕಿಸುವವರೆಗೂ ಹಲವಾರು ಜವಾಬ್ದಾರಿಗಳನ್ನು ವಹಿಸುವ ಇವರ ಕಾರ್ಯ ಶ್ಲಾಘನಾರ್ಹ. ಹಾಗಾಗಿ ಈ ಕಾರ್ಯಕರ್ತೆಯರಿಗೆ ನನ್ನಿಂದ ಒಂದು ಪುಟ್ಟ ಕಾಣಿಕೆಯನನ್ನು ಈ ಕಾರ್ಮಿಕ ದಿನದಂದು ನೀಡಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.