ಐಪಿಎಲ್ 2021 ಸ್ಥಗಿತ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಘೋಷಣೆ | ಜನತಾ ನ್ಯೂಸ್
ನವದೆಹಲಿ: : ಐಪಿಎಲ್ 2021 ಸರಣಿ ಕೊರೊನಾ ಕಾರಣದಿಂದ ಸ್ಥಗಿತಗೊಂಡಿದೆ. ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ.
ಈ ಋತುವಿನಲ್ಲಿ ಐಪಿಎಲ್ ಪಂದ್ಯಗಳನ್ನು ಅಮಾನತುಗೊಳಿಸಲಾಗಿದೆ ಅಂತ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಎಎನ್ಐಗೆ ತಿಳಿಸಿದ್ದಾರೆ. ನೈಟ್ ರೈಡರ್ಸ್ನ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ಸೀಮ್ ಬೌಲರ್ ಸಂದೀಪ್ ವಾರಿಯರ್ ಅವರು ಕೋವಿಡ್ -19 ಸೊಂಕಿಗೆ ಈಡಾದ ಬಳಿಕ ಅಹಮದಾಬಾದ್ನ ಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಸೋಮವಾರದ ಪಂದ್ಯ ಮುಂದೂಡಿದ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಮಂಗಳವಾರ ನಡೆಯಬೇಕಿದ್ದ ಪಂದ್ಯ ಅನುಮಾನ ಇತ್ತು. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಅಮಿತ್ ಮಿಶ್ರಾ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ವೃದ್ಧಿಮಾನ್ ಸಾಹ ಅವರಲ್ಲೂ ಕೊರೊನಾ ದೃಢಪಟ್ಟಿತ್ತು.
ಹಲವು ತಂಡಗಳ ಆಟಗಾರರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿದ್ದು, ಮುಂದಿನ ದಿನಾಂಕವನ್ನು ಶೀಘ್ರವಾಗಿ ಪ್ರಕಟಿಸುವುದಾಗಿ ತಿಳಿಸಿದೆ.
IPL suspended for this season: Vice-President BCCI Rajeev Shukla to ANI#COVID19 pic.twitter.com/K6VBK0W0WA
— ANI (@ANI) May 4, 2021