ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆಯಿದೆ ಎಂಬ ಅನುಮಾನವಿದೆ: ಈಶ್ವರಪ್ಪ | ಜನತಾ ನ್ಯೂಸ್
ಶಿವಮೊಗ್ಗ : ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಯಾವುದೋ ಮುಸ್ಲಿಂ ಸಂಘಟನೆಯೇ ಇದೆಯೇ ಎಂಬ ಅನುಮಾನವಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೋ ಮುಸ್ಲಿಂ ಸಂಘಟನೆಯೇ ಭಾಗಿಯಾಗಿದೆ ಎಂಬ ಅನುಮಾನ ಕಾಡುತ್ತಿದೆ.
ಆ ದಂಧೆಯಲ್ಲಿ ಅತೀ ಹೆಚ್ಚಾಗಿ ಮುಸ್ಲಿಂ ಸಮೂದಾಯದವರೇ ಇದ್ದಾರೆ. ರಾಜ್ಯದಲ್ಲಿ ನಾವು ಹಾಗೋ ಹೀಗೋ ಕೋವಿಡ್ ಮ್ಯಾನೇಜ್ ಮಾಡುತ್ತಿದ್ದೇವೆ. ಆದರೆ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೆಲವು ವ್ಯಕ್ತಿಗಳು ಮಾಡುತ್ತಿದ್ದಾರೆ ಎಂದರು.
ಇದರ ಹಿಂದೆ ಯಾರಿದ್ದಾರೆ ಎಂಬುದು ತನಿಖೆ ನಂತರ ಗೊತ್ತಾಗುತ್ತೆ. ಅದು ಸಂಘಟನೆಯೋ, ವ್ಯಕ್ತಿಗಳೋ ಸ್ಪಷ್ಟ ಆಗಬೇಕಾಗುತ್ತದೆ. ಇದು ತನಿಖೆಯಿಂದ ಹೊರ ಬರಲಿದೆ, ತಪ್ಪಿತಸ್ಥರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದು ಈಶ್ವರಪ್ಪ ಹೇಳಿದರು.