ಅಣ್ಣಮ್ಮನ ಆಶೀರ್ವಾದದಿಂದ ಕೊರೊನಾ ಕಡಿಮೆಯಾಗುವ ನಂಬಿಕೆ ಇದೆ: ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಸರಿಯಾಗಿ ಲಾಕ್ಡೌನ್ ಪಾಲನೆ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹೀಗಾಗಿ ಬಿಗಿಯಾದ ಕ್ರಮ ಅನಿವಾರ್ಯವಾಗಬಹುದು ಎಂದಿದ್ದಾರೆ.
ಅವರು ಇಂದು ನಗರದ ಅಣ್ಣಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಅಣ್ಣಮ್ಮನ ಆಶೀರ್ವಾದದಿಂದ ಕೊರೊನಾ ಕಡಿಮೆಯಾಗಿ, ಜನ ನೆಮ್ಮದಿಯಿಂದ ಜೀವನ ಮಾಡುತ್ತಾರೆಂಬ ನಂಬಿಕೆ ಇದೆ ಎಂಬ ಆಶಾವಾದದ ಮಾತುಗಳನ್ನೂ ಆಡಿದ್ದಾರೆ.
ಜನರು ಕೋವಿಡ್ ಕರ್ಫ್ಯೂವನ್ನು ಜನರು ಪಾಲಿಸುತ್ತಿಲ್ಲ. ನಾವು ನೀಡುವ ಎಚ್ಚರಿಕೆಯನ್ನು ಪಾಲಿಸುತ್ತಿಲ್ಲ. ಕಠಿಣ ಕ್ರಮ ಬೇಡ ಅನ್ನೋದಾದರೆ ಜನರು ಇನ್ನಾದರೂ ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರವನ್ನು ಕಾಪಾಡುವುದರತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಲಾಕ್ಡೌನ್ ನಂತಹ ಕಠಿಣ ಕ್ರಮ ಅನಿವಾರ್ಯ ಆಗಬಹುದು ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ.
ಬಿಬಿಎಂಪಿ ಬೆಡ್ ಬ್ಲಾಕಿಂಗ್ ದಂಧೆಯ ಬಗ್ಗೆ ಧ್ವನಿ ಎತ್ತಿ ಸಂಸದ ತೇಜಸ್ವಿ ಸೂರ್ಯ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ. ಹಗರಣವನ್ನು ಬೆಳಕಿಗೆ ತಂದಿರುವುದು ಉತ್ತಮ ಕಾರ್ಯ ಎಂದಿದ್ದಾರೆ.