ಸದಾನಂದಗೌಡರವರೆ ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ ಕಾನೂನಿಗೆ ವಿರುದ್ಧವಾದುದು: ಸಿದ್ದರಾಮಯ್ಯ | ಜನತಾ ನ್ಯೂಸ್
ಬೆಂಗಳೂರು : ಕೇಂದ್ರ ಸಚಿವರ ಡಿ.ವಿ ಸದಾನಂದ ಕೂಡ ಸಾಕಷ್ಟು ಲಸಿಕೆ ಉತ್ಪಾದನೆಯಾಗದಿದ್ದರೆ ನಾವೇನು ನೇಣು ಹಾಕಿಕೊಳ್ಳಲಿಕ್ಕೆ ಆಗುತ್ತದಾ? ಎಂದು ಪ್ರಶ್ನಿಸಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಲಸಿಕೆ ಉತ್ಪಾದನೆಯಾಗಿಲ್ಲ ಅಂತ ಹೇಳಿದ್ದರು.
ಕೇಂದ್ರ ಸಚಿವ ಸದಾನಂದಗೌಡ ಅವರ ವಿರುದ್ಧ ಹರಿಹಾಯ್ದಿರುವ ಅವರು, ಸದಾನಂದ ಗೌಡ ಅವರೇ, ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ ಕಾನೂನಿಗೆ ವಿರುದ್ಧವಾದುದು ಕೂಡಾ, ಅದನ್ನೆಲ್ಲ ಮಾಡಲು ಹೋಗಬೇಡಿ. ಆಡಳಿತ ನಡೆಸುವುದು ನಿಮಗಾಗದ ಕೆಲಸ, ಮರ್ಯಾದೆಯಿಂದ ರಾಜೀನಾಮೆ ಕೊಟ್ಟು ಹೊರಟುಬಿಡಿ, ದೇಶಕ್ಕಾಗಿ ಅಷ್ಟು ಮಾಡಿ ಪುಣ್ಯ ಕಟ್ಕೊಳ್ಳಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
RELATED TOPICS:
English summary :Siddaramaiah