ಮದುವೆಯಾದ 9 ವರ್ಷದ ನಂತರ ಜನನ ಸಂತೋಷದ ಘಳಿಗೆಯಲ್ಲಿ ತಂದೆ, ತಾಯಿ ಕೊರೊನಾಗೆ ಬಲಿ; ತಬ್ಬಲಿಯಾದ 5 ದಿನದ ಮಗು | ಜನತಾ ನ್ಯೂಸ್
ಮಂಡ್ಯ : 15 ದಿನಗಳ ಅಂತರದಲ್ಲಿ ತಂದೆ ಮತ್ತು ತಾಯಿಯನ್ನು ಕಳೆದುಕೊಂಡ 5 ದಿನದ ಹೆಣ್ಣು ಮಗು ತಬ್ಬಲಿಯಾದ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿ ಗ್ರಾಮದ ನಿವಾಸಿ ನಂಜುಂಡೇಗೌಡ (45) ಮತ್ತು ಮಮತಾ (31) ಮೃತ ದಂಪತಿ.
ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ನಂಜುಂಡೇಗೌಡ ಏಪ್ರಿಲ್ ನಲ್ಲಿ ಕರೊನಾ ಸೋಂಕಿನಿಂದಾಗಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಏಪ್ರಿಲ್ 30 ರಂದು ಚಿಕಿತ್ಸೆ ಫಲಕಾರಿಯಾಗದೆ ನಂಜುಂಡೇಗೌಡ ಮೃತಪಟ್ಟಿದ್ದರು.
ತುಂಬು ಗರ್ಭಿಣಿಯಾಗಿದ್ದ ಪತ್ನಿ ಮಮತಾಗೂ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಹೋಂ ಐಶೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದರಿಂದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇ 11ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಮತಾ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಸಂಜೆ ಮೃತಪಟ್ಟರು.
ಮದುವೆಯಾದ 9 ವರ್ಷದ ನಂತರ ಮಗು ಜನಿಸಿದ್ದು, ಸಂತೋಷದ ಘಳಿಗೆಯಲ್ಲಿ ಕೊರೊನಾ ತಂದೆ, ತಾಯಿ ಪ್ರೀತಿಯಿಂದ ಮಗುವನ್ನು ವಂಚಿತವಾಗಿಸಿದೆ. ಮೃತ ದಂಪತಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.