ಮಂಗಳೂರಿನಲ್ಲಿ ನಾಪತ್ತೆಯಾಗಿದ್ದ ಬೋಟ್ ಪತ್ತೆ: ಹಡಗಲ್ಲಿ ಇದ್ದ ಒಂಬತ್ತು ಜನರು ಸುರಕ್ಷಿತ | ಜನತಾ ನ್ಯೂಸ್
ಮಂಗಳೂರು : ಜಿಲ್ಲೆಯಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದ್ದು ಅಲೆಗಳ ಅಬ್ಬರದಿಂದ ನಾಪತ್ತೆಯಾಗಿದ್ದ ಬೋಟ್ ಪತ್ತೆಯಾಗಿದೆ. ಬೋಟ್ನಲ್ಲಿರುವವರು ಸೆಲ್ಫಿ ವಿಡಿಯೋ ಮಾಡುವ ಮೂಲಕ ರಕ್ಷಣೆ ಮಾಡುವಂತೆ ಕೇಳಿಕೊಂಡಿದ್ದರು.
ಕಾಪು ಬೀಚ್ನಿಂದ 25 ನಾಟಿಕಲ್ ಮೈಲ್ ದೂರದಲ್ಲಿ ಪತ್ತೆ ಬೋಟ್ ಪತ್ತೆಯಾಗಿದೆ. ಬೋಟ್ನಲ್ಲಿರುವ 9 ಜನರು ಸುರಕ್ಷಿತವಾಗಿರುವ ಮಾಹಿತಿ ತಿಳಿದು ಬಂದಿದೆ.
ಸದ್ಯ ಬೋಟ್ನಲ್ಲಿ ಸುರಕ್ಷಿತವಾಗಿರುವ 9 ಮಂದಿ ಸಿಬ್ಬಂದಿಯನ್ನು ಸುರಕ್ಷಿತವಾಗಿ ದಡಕ್ಕೆ ಕರೆತರಲು ಕೋಸ್ಟ್ ಗಾರ್ಡ್ ಸಿಬ್ಬಂದಿ ಪ್ರಯತ್ನ ಮಾಡುತ್ತಿದೆ. ಸೆಲ್ಫಿ ವಿಡಿಯೋ ಮಾಡಿ ರಕ್ಷಣೆಗೆ ಮೊರೆ ಹೋಗಿದ್ದಾರೆ. ಕರಾವಳಿ ಕಾವಲುಪಡೆ ಪೊಲೀಸರಿಗೆ ವೀಡಿಯೋ ರವಾನೆ ಮಾಡಲಾಗಿದೆ.
ಕೋಸ್ಟ್ ಗಾರ್ಡ್ ಸಿಬ್ಬಂದಿ ಕಾರ್ಮಿಕರನ್ನು ರಕ್ಷಿಸಲು ಸಮುದ್ರದ ಅಬ್ಬರ ಅಡ್ಡಿಯುಂಟು ಮಾಡಿದೆ. ಸಮುದ್ರದ ಅಬ್ಬರ ಕಡಿಮೆಯಾದ ಬಳಿಕ ಕೋಸ್ಟ್ ಗಾರ್ಡ್ ಗಳು ರಕ್ಷಣಾ ಕಾರ್ಯಾಚರಣೆ ಮಾಡಲಿದ್ದಾರೆ.
ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್, ಜಿಲ್ಲಾಧಿಕಾರಿ ಜಿ ಜಗದೀಶ್, ಎಸ್ಪಿ ಎಸ್ ವಿಷ್ಣುವರ್ಧನ್ ಭೇಟಿ ನೀಡಿದ್ದಾರೆ.