Sat,May18,2024
ಕನ್ನಡ / English

ಕ್ಷಮೆ ಕೇಳಲಿ ಎಂದ ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆಗೈದ ಶಾಸಕ ಸಾರಾ ಮಹೇಶ್! | ಜನತಾ ನ್ಯೂಸ್

16 May 2021
1373

ಮೈಸೂರು : ನನ್ನ ಮೇಲೆ ಆರೋಪ ಮಾಡಿದವರು ಕ್ಷಮೆ ಕೇಳಬೇಕು ಎಂದು ರೋಹಿಣಿ ಸಿಂಧೂರಿ ನಿನ್ನೆ ಹೇಳಿಕೆ ನೀಡಿದ್ದ ಹಿನ್ನೆಲೆ ಸಾ.ರಾ ಮಹೇಶ್​​ ಡಿ.ಸಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹೇಶ್​, ಒಬ್ಬ ಕನ್ನಡಿಗ ದಲಿತ ಡಿಸಿಯನ್ನು 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳಾ? ನಿಮ್ಮ ಹಾಸನದ ಪ್ರಕರಣದಲ್ಲಿ ತಕ್ಷಣ ನಿಮ್ಮ ಪರ ತೀರ್ಪು ಬಂತು. ಈಗ ಅದರ ತೀರ್ಪು ಬರದಂತೆ ಸಿಎಟಿ ಮ್ಯಾನೇಜ್ ಮಾಡಿದ್ದು ಸುಳ್ಳ? ಎಂದು ಕೇಳಿದರು. ವಾಲ್ಮೀಕಿ ಜಯಂತಿ ಆಚರಣೆಗೆ ಬರಲಿಲ್ಲ. ಬದಲಾಗಿ ಬಂಡೀಪುರಕ್ಕೆ ಹೋಗಿದ್ದು ಸುಳ್ಳಾ? ಎಂದು ಪ್ರಶ್ನೆ ಮಾಡಿದರು.

ಮಾತ್ರೆ ಕೊಡಲು ದುಡ್ಡಿಲ್ಲ. ಕರೊನಾ ಸಂದರ್ಭದಲ್ಲಿ ಇನ್ ಡೋರ್ ಜಿಮ್, ಸ್ವಿಮ್ಮಿಂಗ್ ಪೂಲ್ ಕಟ್ಟಿಸಿರುವುದು ಸುಳ್ಳಾ? ಅದು ಪಾರಂಪರಿಕ ಕಟ್ಟಡದಲ್ಲಿ ಈಜುಕೊಳಕ್ಕೆ ಅನುಮತಿ ಕೊಟ್ಟವರು ಯಾರು? ಇದಕ್ಕೆ ಹಣ ಎಲ್ಲಿಂದ ಬಂತು? ಅದು ಕಟ್ಟಿರೋದು ಸುಳ್ಳಾ?

ರಾಜ್ಯದ ಸಿಎಂ ಮತ್ತು ರಾಷ್ಟ್ರದ ಪಿಎಂ ಮನೆಯಲ್ಲಿ ಈಜುಕೊಳ ಇದೆಯಾ? ರಾಜ್ಯ ಮುಖ್ಯ ಕಾರ್ಯದರ್ಶಿ ಮನೆಯಲ್ಲಿ ಇದೆಯಾ? ನಾವು-ನೀವು ಜನರಿಗೆ ಮಾದರಿಯಾಗಿರಬೇಕು ಎಂದು ಸಲಹೆ ನೀಡಿದರು.

ಕರ್ನಾಟಕದ ಹಣ ತಿರುಪತಿಗೆ ಕೊಟ್ಟಿದ್ದು ಸುಳ್ಳಾ? ಐಎಎಸ್ ಅಧಿಕಾರಿಗಳ ಬೇಜವಾಬ್ದಾರಿಯಿಂದ ರಾಜ್ಯ ಹೊತ್ತಿ ಉರಿದಿದ್ದು ಸುಳ್ಳಾ? ಈಜುಕೊಳದ 50 ಲಕ್ಷ ರೂ. ಕರೊನಾಗೆ ಬಳಸಬೇಕಿತ್ತು.

ನಿಮ್ಮನ್ನು ಯಾರೂ ಪ್ರಶ್ನೆ ಮಾಡಲೇಬಾರದ? ಇಂತಹ ಪರಿಸ್ಥಿತಿಯಲ್ಲೂ ಮೈಸೂರಿನಲ್ಲಿ ಶಾಸಕರು, ಪಾಲಿಕೆ ಸದಸ್ಯರು ಕೆಲಸ ಮಾಡುತ್ತಿರುವುದಕ್ಕೆ ಕೇಳಬೇಕಾ? ಇದಕ್ಕೆ ಸೂಕ್ತ ವೇದಿಕೆಯಲ್ಲಿ ತಕ್ಕ ಉತ್ತರ ನೀಡುವೆ ಎಂದು ಸವಾಲು ಎಸೆದರು.

ಇದಕ್ಕೆ ಸೂಕ್ತ ವೇದಿಕೆಯಲ್ಲಿ ತಕ್ಕ ಉತ್ತರ ನೀಡುವೆ. ಇದೆಲ್ಲಾ ಏನೇ ಇರಲಿ ನೊಂದವರ ನಿಟ್ಟುಸಿರು ತಟ್ಟದೆ ಬಿಡುವುದಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ದ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.

ಇದೇ ವೇಳೆ ಸಾಂಕ್ರಾಮಿಕ ಹೆಚ್ಚಳವಾಗ್ತಿರೊ ಬಗ್ಗೆ ಮಾತನಾಡಿದ ಮಹೇಶ್​, ತಜ್ಞರು-ಮಾಧ್ಯಮಗಳ ವರದಿಯಂತೆ ಈಗಾಗಲೇ ಮೂರನೇ ಅಲೆ ಶುರುವಾಗಿದೆ. ಲಾಕ್‌ಡೌನ್‌ನಿಂದ ಈಗಾಗಲೇ ಶ್ರಮಿಕ ವರ್ಗ ತುಂಬಾ ನೊಂದಿದೆ. ಹೋರಾಟದಿಂದ ಬಂದಿರುವ ಸಿಎಂ ಆರ್ಥಿಕವಾಗಿ ಸಹಾಯ ಮಾಡಬೇಕು. ಆರ್ಥಿಕ ಸಂಕಷ್ಟ ಇರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಕಳೆದ ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಇದಕ್ಕಾಗಿ ಎಲ್ಲಾ ಶಾಸಕರು, ಪರಿಷತ್ ಸದಸ್ಯರ ಒಂದು ವರ್ಷದ ವೇತನ ಬಳಸಿಕೊಳ್ಳಿ ಎಂದರು.

RELATED TOPICS:
English summary :Mysuru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...