ನರ್ಸಿಂಗ್ ವಿದ್ಯಾರ್ಥಿನಿ ಮತ್ತು ಕೊರೊನಾ ಸೋಂಕಿತರ ಕುಟುಂಬಕ್ಕೆ ಬೆದರಿಕೆ, ಹಲ್ಲೆ! | ಜನತಾ ನ್ಯೂಸ್
ಬೆಂಗಳೂರು : ಕರೊನಾ ಹರಡುತ್ತೀರಾ ಎಂದು ಆರೋಪಿಸಿ ನಸಿರ್ಂಗ್ ವಿದ್ಯಾರ್ಥಿನಿ ಮತ್ತು ಆಕೆ ಕುಟುಂಬದವರ ಮೇಲೆ ಸ್ಥಳಿಯರು ಗಲಾಟೆ ಮಾಡಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ.
ಲಕ್ಷ್ಮಿಪುರದ ನಿವಾಸಿ ಪ್ರಿಯದರ್ಶಿನಿ ಹಲ್ಲೆಗೆ ಒಳಗಾದವರು. ಪ್ರಿಯದರ್ಶಿನಿ ಅವರು ತಂದೆ- ತಾಯಿ ಜೊತೆ ವಾಸವಿದ್ದಾರೆ. 2020ರ ಸೆಪ್ಟೆಂಬರ್ನಲ್ಲಿ ತಾಯಿಗೆ ಕೊರೊನಾ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಅವರು ಗುಣಮುಖರಾಗಿದ್ದರು. ಆದರೆ ಅಕ್ಕ- ಪಕ್ಕದ ಕೆಲ ಮನೆಯವರು ಅವರಿಗೆ ಕಿರುಕುಳ ನೀಡಲಾರಂಭಿಸಿದ್ದರು.
ಅಕ್ಕಪಕ್ಕ ಮನೆಯ ನಿವಾಸಿಗಳಾದ ರಾಮ್, ಪ್ರಭು ಹಾಗೂ ಅರ್ಜುನ್ ಜಗಳ ಮಾಡುತ್ತಿದ್ದರು. ಮೇ 14ರಂದು ಸಂಜೆ ನಮ್ಮ ಮನೆ ಹತ್ತಿರ ಬಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದರು. ಜಗಳ ಬಿಡಿಸಲು ತೆರಳಿದ ನನ್ನ ಕೈಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.
ನೊಂದ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ನೆರೆಹೊರೆಯ ನಿವಾಸಿಗಳಾದ ರಾಮ್, ಪ್ರಭು ಹಾಗೂ ಅರ್ಜುನ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.