ಹಾಸನದಲ್ಲಿ ರೈಲಿಗೆ ಸಿಲುಕಿ ಕಾಡಾನೆ ದಾರುಣ ಸಾವು! | ಜನತಾ ನ್ಯೂಸ್
ಹಾಸನ : ರೈಲಿಗೆ ಕಾಡಾನೆ ಸಿಲುಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಹಸಿಡೆ ಬಳಿ ಸಂಭವಿಸಿದೆ.
ಗುಂಪಿನಿಂದ ಬೇರ್ಪಟ್ಟಿದ್ದ ಒಂಟಿ ಸಲಗ ಕೆಲ ದಿನಗಳಿಂದ ರೈಲ್ವೆ ಹಳಿ ಮೇಲೆ ಹಾಗೂ ರಾಷ್ಟೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡಿತ್ತು. ರೈಲಿಗೆ ಸಿಕ್ಕ ಪರಿಣಾಮ ಕಾಡಾನೆ ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ಬೆಂಗಳೂರು-ಕಾರವಾರ ಮಾರ್ಗದ ರೈಲಿಗೆ ಸಿಲುಕಿ ಒಂಟಿ ಸಲಗ ಕೊನೆಯುಸಿರೆಳೆದಿದೆ. ಈ ಅಪಘಾತದಲ್ಲಿ ರೈಲಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.
ಸದ್ಯ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
English summary :Hasan