18 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದ ಲಸಿಕೆ ಹಂಚಿಕೆ ಪುನರಾರಂಭ -ಸುಧಾಕರ್ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಪುನರಾರಂಭಿಸಲಾಗುತ್ತದೆ ಅಂತಾ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಮೊದಲಿಗೆ, ರಾಜ್ಯ ಸರ್ಕಾರ ಹೊಸದಾಗಿ ಗುರುತಿಸಿರೋ ಫ್ರಂಟ್ಲೈನ್ ವರ್ಕರ್ಸ್ಗೆ ಮೊದಲ ಆದ್ಯತೆ ನೀಡಲಾಗುತ್ತದೆ. ನಂತರ ಇತರರಿಗೂ ಆದ್ಯತೆ ನೀಡಲಾಗುತ್ತದೆ ಅಂತ ಟ್ವೀಟ್ ಮೂಲಕ ಸುಧಾಕರ್ ಮಾಹಿತಿ ನೀಡಿದ್ದಾರೆ.
ಸರ್ಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು:
ಅಂಗವೈಕಲ್ಯ ಹೊಂದಿರುವವರು
ಕೈದಿಗಳು
ಚಿತಾಗಾರ/ ಸ್ಮಶಾನದಲ್ಲಿ ಕೆಲಸ ಮಾಡುವ ಸಿಬ್ಬಂದಿ
ಆರೋಗ್ಯ ಕಾರ್ಯಕರ್ತರ ನಿಕಟ ಕುಟುಂಬಸ್ಥರು
ಕೋವಿಡ್19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು
ಸರ್ಕಾರಿ ಸಾರಿಗೆ ಸಿಬ್ಬಂದಿ
ಆಟೋ & ಕ್ಯಾಬ್ ಚಾಲಕರು
ವಿದ್ಯುತ್ & ನೀರು ಸರಬರಾಜು ಸಿಬ್ಬಂದಿ
ಅಂಚೆ ಇಲಾಖೆಯ ಸಿಬ್ಬಂದಿ
ಬೀದಿ ಬದಿಯ ವ್ಯಾಪಾರಸ್ಥರು
ಭದ್ರತೆ & ಕಚೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿ
ನ್ಯಾಯಾಂಗ ಅಧಿಕಾರಿಗಳು
ವಯೋವೃದ್ದರ/ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಆರೈಕೆದಾರರು
ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಮಾಧ್ಯಮದವರು
ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು
ಆಯಿಲ್ ಇಂಡಸ್ಟ್ರಿ & ಗ್ಯಾಸ್ ಸರಬರಾಜು ಸಿಬ್ಬಂದಿ (ಪೆಟ್ರೋಲ್ ಬಂಕ್, ಕರ್ಮಚಾರಿಗಳು ಒಳಗೊಂಡಂತೆ)
ಔಷಧಿ ತಯಾರಿಸುವ ಕಂಪನಿ ಸಿಬ್ಬಂದಿ
ಆಸ್ಪತ್ರೆಗಳಿಗೆ ಆಯಕ್ಸಿಜನ್, ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನ ಸರಬರಾಜು ಮಾಡುವ ಸಿಬ್ಬಂದಿ
ಅಧಿಕೃತ ಗುರುತಿನ ಚೀಟಿ ಹೊಂದಿರುವ ಫಲಾನುಭವಿಗಳು (ವೃದ್ದಾಶ್ರಮ ವಾಸಿಗಳು, ನಿರ್ಗತಿಕರು)
ಭಾರತೀಯ ಆಹಾರ ನಿಗಮ ಸಿಬ್ಬಂದಿ
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಂ.ಸಿ) ಕೆಲಸಗಾರರು