ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಆಪ್ತನ ಬಂಧನ | ಜನತಾ ನ್ಯೂಸ್
ಬೆಂಗಳೂರು : ಬಿಬಿಎಂಪಿ ಬೆಡ್ ಬಾಕ್ಲಿಂಗ್ ಪ್ರಕರಣದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಆಪ್ತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಾಬು ಬಂಧಿತ ಆರೋಪಿ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಾಬುನನ್ನು ವಶಕ್ಕೆ ಪಡೆದು ಸಿಸಿಬಿ ವಿಚಾರಣೆ ನಡೆಸಿತ್ತು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ.
ಬಳಿಕ ಕೊರೊನಾ ಸೋಂಕು ದೃಢವಾಗಿತ್ತು. ಹೋಮ್ ಕ್ವಾರಂಟೈನ್ನಾಗಿ ಗುಣಮುಖರಾದ ಬಳಿಕ ಆತನನ್ನು ಬಂಧಿಸಲಾಗಿದೆ.
ಕೊರೊನಾ ಸೋಂಕು ಗುಣಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ಎಂದು ಕಂಡು ಬಂದು ಹೋಮ್ ಐಸೋಲೇಷನ್ನಲ್ಲಿದ್ದ ಸೋಂಕಿತರ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಬ್ಲಾಕ್ ವಂಚನೆ ಜಾಲದಲ್ಲಿ ತೊಡಗಿದ್ದ ನೇತ್ರಾವತಿ ಹಾಗೂ ರೋಹಿತ್ ಎಂಬುವರನ್ನು ಮೇ 3 ರಂದು ಜಯನಗರ ಪೊಲೀಸರು ಬಂಧಿಸಿದ್ದರು.
ಈತ ಹಲವು ಮಂದಿಯಿಂದ ಹಣ ಪಡೆದಿದ್ದ ಎನ್ನಲಾಗುತ್ತಿದೆ. ಎಷ್ಟು ಮಂದಿಗೆ ಬೆಡ್ ಬ್ಲಾಕ್ ಮಾಡಿಸಿದ್ದ? ಎಷ್ಟು ಹಣ ಸಂಪಾದನೆ ಮಾಡಿದ್ದ ಎಂಬುದರ ಬಗ್ಗೆ ಇನ್ನು ತಿಳಿದುಬರಬೇಕಿದೆ ...